Home / ಕವನ / ಕವಿತೆ / ಸ್ವಾತಂತ್ರ ಗೀತೆ

ಸ್ವಾತಂತ್ರ ಗೀತೆ

ನನ್ನ ದೇಶದ ವಿಶಾಲ ಹೂದೋಟದಿಂದ
ವಿವಿಧ ಹೂಗಳ ಒಂದುಗೂಡಿಸಿ,
ಒಂದು ಹೂದಾನಿ ಅಲಂಕರಿಸಿ,
ಮೇಜಿನ ಮೇಲಿಟ್ಟು
ಜಗತ್ತಿಗೇ ತೋರಿಸಿ ಹೇಳಿದೆ-
ನೋಡಿ ಇಲ್ಲಿ ಕಾಶಿ, ಮಥುರಾ,
ಅಜಮೀರ, ಅಮೃತಸರ್
ಕಾಶ್ಮೀರ್, ಕನ್ಯಾಕುಮಾರಿಯ
ಸುಂದರ ಹೂಗಳಿವೆ-
ಮಂದಿರವೂ ಇಲ್ಲಿದೆ-
ಮಜ್ಜಿದವೂ ಇಲ್ಲಿದೆ ಮತ್ತೇ
ತಾಜಮಹಲಿನ ನೆರಳುಗಳೂ ಇಲ್ಲಿವೆ-
ಪೈಗಂಬರರ ಪರಿಛಾಯೆ-
ರಾಮನ ನಾಮವೂ ಇಲ್ಲಿದೆ
ಹಿಂದು-ಮುಸಲ್ಮಾನರಿಬ್ಬರೂ
ಭಾರತಾಂಬೆಯ ಎರಡು ಕಣ್ಣುಗಳು,
ಅವರ ರಕ್ತದ ಓಕುಳಿ
ಅಶುಭದ ಸಂಕೇತ;

ಉನ್ನತ ಹಿಮಾಲಯದ ಎತ್ತರ
ಜಗತ್ತಿನ ದೃಷ್ಟಿಯಲ್ಲಿ
ಕುಬ್ಜವಾಗಲೆಂದೂ ಬಿಡೆವು ನಾವು.
ಮಾನವೀಯ ಮೌಲ್ಯಗಳು
ನಾಶವಾಗುವದನೆಂದೂ ಸಹಿಸೆವು ನಾವು
ದೇಶದ ಸರಹದ್ದುಗಳಿಗೆ
ಮಮತೆಯಿಂದ ಚುಂಬಿಸಿ,
ಹರಡಿದ ನಮ್ಮ ಕನಸುಗಳನು
ಒಟ್ಟುಗೂಡಿಸುವೆವು ನಾವು.
ಪರದೇಶಿ ಹದ್ದುಗಳ ನೆರಳು
ಪವಿತ್ರ ಭಾರತದ ಮೇಲೆ
ಎಂದಿಗೂ ಸಹಿಸೆವು ನಾವು.

ಸ್ನೇಹದ ಹಸ್ತ ನೀಡದೇ
ಗುಲಾಮಿಯ ಕೋಳ ತೊಡಿಸುವ
ಸಾಮ್ರಾಜ್ಯ ಶಾಹಿಗಳ ನೀತಿಗೆ
ಪಾಠ ಕಲಿಸುವೆವು ನಾವು
ಗುಲಾಮಗಿರಿಯ ಕೊಳವನು,
ಕತ್ತರಿಸುವ ಖಡ್ಗವ ವಾಗುವೆವು ನಾವು.
ಭಾರತದ ಸ್ವತಂತ್ರ ಸೂರ್ಯನ
ಪ್ರಖರ ತೇಜಸ್ಸನ್ನು ಜಗತ್ತಿಗೇ
ತೆಗೆದು ತೋರುವೆವು ನಾವು.
ಸ್ವಾತಂತ್ರ ಗೀತೆಯನು
ಸಂಭ್ರಮದಿಂದ ಹಾಡುವೆವು ನಾವು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...