ದುರಂತ

ವರ್ಷಗಳೇ ಕಳೆದವು
ಭೂಪಾಲದ ಬಿಕ್ಕುಗಳು
ನಿಂತು ಹೋಗಲಿಲ್ಲ.
ರೋದನ ಶಾಂತವಾಗಲಿಲ್ಲ.
ಕಾರ್ಖಾನೆಗಳು ಉಗುಳಿದ
ಕಪ್ಪನೆಯ ವಿಷಗಾಳಿ
ಕೊಲೆಯಾಯ್ತು ಊರೆಲ್ಲಾ
ಸ್ಮಶಾನವಾಯ್ತು.

ರಹಸ್ಯ ರಾತ್ರಿಯಲಿ
ಕರಾಳ ಕೈಗಳು-
ಛಸನಾಲಾ ದುರಂತದ
ಗಣಿಯಿಂದ ಇಣುಕುತ್ತಿರುವ
ಅಸಹಾಯಕ ನೋಟಗಳು
ಬೇರುಗಳು ಪಸರಿಸಿ
ಆಳದಲ್ಲಿ ಹರಿಬಿಟ್ಟು
ಅಸನ್ಸೂಲ್ ಗಣಿಯಲ್ಲಿ
ಉಸಿರುಗಟ್ಟಿ ಬೆಂದುಹೋದ
ಸಮಾಧಿಯಾದ ಜೀವಗಳು
ಸಂಸ್ಕಾರವಿಲ್ಲದೇ
ಕೊನೆಯಾದ ದೇಹಗಳು

ಶ್ರಮಿಕರ ರಕ್ತದಿಂದ ತೋಯ್ದ
ಅಸ್ತಿಗಳನ್ನು ಬಚ್ಚಿಡುವುದೆಲ್ಲಿ?
ಪರಿಹಾರ ಕೊಡುವುದಿರಲಿ
ಆಸ್ತಿಯನ್ನು ದಕ್ಷಿಸಿಕೊಳ್ಳಲು
ಶವಗಳ ರಾಶಿಗಳ ಮೇಲೆ
ಶಾಪಗ್ರಸ್ತ ಅಹವಾಲುಗಳಿಗೆ
ಕೋರ್ಟಿನ ಚೌಕಟ್ಟಿನಲ್ಲಿ
ನ್ಯಾಯ ಹೇಗೆ
ಪಡೆಯುವಿರಿ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಡು ಕೌತುಕವಲಾ? ಈ ಬಗೆಯ ಶರಣಾಗತಿ?
Next post ಟಚ್ ಇರಲಿ

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…