Home / ಕವನ / ಕವಿತೆ / ಕೈಗಾರೀಕರಣ ಮತ್ತು ಸೈತಾನ

ಕೈಗಾರೀಕರಣ ಮತ್ತು ಸೈತಾನ

ನೀವು ಕೇಳುತ್ತೀರಿ
ವಿಂಡ್ಸರ್ ಮ್ಯಾನರ್
ರಸ್ತೆ ಬದಿಯಲ್ಲಿರುವ
ಡೇರಿ ಹೂಗಳ ಮೇಲೆ
ಕಪ್ಪು ಎಣ್ಣೆ ಸವರಿದವರ್‍ಯಾರೆಂದು?
ಗುಲಾಬಿ, ಹೂಗಳ ಬಣ್ಣ
ಕಪ್ಪಾಗಿರುವುದು ಯಾಕೆಂದು
ವಿಸ್ತರಣೆಯ ನೆಪದಲ್ಲಿ
ಕೈಗಾರಿಕೀಕರಣ ಶಾಸ್ತ್ರದಲ್ಲಿ
ಹುದುಗಿರುವ ಸಂಸ್ಕೃತಿ
ಇದುವೆಯೇ? ಎಂದು.

ನಾನು ವಾಸವಾಗಿದ್ದ
ಆರ್.ಟಿ. ನಗರದಲಿ
ಮಶೀನುಗಳ ಗಡಿಯಾರದ
ಮುಳ್ಳುಗಳ ಮಧ್ಯ
ದಿನಗಳು ನೂಕಿದ್ದು
ನನ್ನ ಅರಿವಿಗೆ
ಬಾರದೆ ಹೋಯಿತು.

ನನ್ನ ಮನೆ ಮೇಲಿಂದ
ನೋಡಿದರೆ ತಿಳಿನೀರಿನ
ಕೆರೆ, ಬನ ಕಾಣುತ್ತಿದ್ದವು.
ಈಗ ಸಿಮೆಂಟು ಕಾಂಕ್ರೀಟುಗಳು
ಆ ಕೆರೆಯನ್ನೂ ಹೂಬನವನ್ನೂ
ಸದ್ದಿಲ್ಲದೇ ನುಂಗಿ ಹಾಕಿದ್ದವು.

ಅಂದು ರಾಗಿ ರೊಟ್ಟಿಗೆ
ಚಟ್ನಿ ಗತಿಯಿಲ್ಲದ ದಿನಗಳಲ್ಲಿ
ಉಪ್ಪಿನ ಹರಳುಗಳೇ
ನಮಗೆ ಗತಿಯಾಗಿದ್ದವು.
ಇಂದು ಹರಳುಪ್ಪು
ಮಾರುಕಟ್ಟೆಯಿಂದ ಮಾಯವಾಗಿ
ಅಯೋಡಿನ್ ರಹಿತ
ಪುಡಿಯುಪ್ಪಿಗೆ ನಗರಗಳು
ಶರಣಾದೆವು ಗೆಳತಿ.

ದೊಡ್ಡ ದೊಡ್ಡ ನಗರಗಳು
ಕಾರ್ಖಾನೆ ಕಂಪನಿಗಳು
ಬೃಹತ್ ಉದ್ದಿಮೆಗಳ ಉಗಮ
ಕಾರ್ಖಾನೆಗಳ ಕೊಳವೆಯಲ್ಲಿ
ನನ್ನವರ ಕೆಂಪುರಕ್ತ
ಕಪ್ಪು ಬಣ್ಣ ಕಾರಿದಾಗ
ಬಂಡವಾಳಶಾಹಿ ಸೈತಾನ
ಮೀಸೆಯ ಮರೆಯಲ್ಲಿ
ನಗುತ್ತಿದ್ದ ಗೆಳತಿ ನಗುತ್ತಿದ್ದ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...