Home / ಕವನ / ಕವಿತೆ / ಅಡವಿಟ್ಟ ಸ್ವಾತಂತ್ರ್ಯ

ಅಡವಿಟ್ಟ ಸ್ವಾತಂತ್ರ್ಯ

ಒಣಗಿದ ನನ್ನವ್ವನ ಎದೆಯಿಂದ
ಝಲ್ಲೆಂಬ ಜೀವರಸ ಬತ್ತಿ
ಎಂದಿಗೂ ಬಾಯಿ ತುಂಬಾ ಗುಟುಕು
ಎಟುಕಲಿಲ್ಲ ನನ್ನ ಬಾಯಿಗೆ.
ಏಕೆಂದರೆ ನನ್ನಪ್ಪನ ಕಷ್ಟಗಳು
ಅವಳಿಗೆ ಹೊಟ್ಟೆ ತುಂಬಿಸಲಿಲ್ಲ.
ಬಡತನದ ಬೇಗೆಯಿಂದ ಬೇಸತ್ತು
ನನ್ನಪ್ಪ – ನನ್ನವ್ವನಿಗೆ ಅಡವಿಟ್ಟ ಒಂದು ದಿನ
ತಾಯಿ – ಕಂದನ ಬೇರೆ ಮಾಡಿದ್ದನು.
ನನ್ನವ್ವನಿಗೆ ಬಿಗಿದಿರುವ
ಗುಲಾಮಗಿರಿಯ ಸಂಕೋಲೆ
ಪ್ರಶ್ನೆ ಮಾಡಿದ್ದಕ್ಕೆ ನಾನು
ದೇಶದ್ರೋಹಿ ಎನಿಸಿಕೊಂಡೆ
ಈ ತಾಯಿ, ಮಾತೃಭೂಮಿ
ಸರಹದ್ದುಗಳಲ್ಲಿ ಸೈನಿಕರು
ತಾಯ್ ಸೆರೆಯ ಬಿಡಿಸಲು
ಪ್ರಾಣಗಳ ಬಲಿಗಳು
ಹೋರಾಟದ ಆರ್ಭಟದಲಿ
ಮಾರಾಟದ ಒಪ್ಪಂದಗಳನ್ನು
ಕುದುರಿಸಿದವರು ನೀವು
ಸಾಮ್ರಾಜ್ಯಶಾಹಿಗಳಿಗೆ ಕುರ್ಚಿ
ಆಸನಗಳ ಒದಗಿಸಿದ ಕುತಂತ್ರಿಗಳೇ
ಎಚ್ಚರ!
ನನ್ನವ್ವನ ಒಡಲ ಕಿಚ್ಚಿನಿಂದ
ಹೊರಬಿದ್ದ ಅವಳ ನಿಟ್ಟುಸಿರಿನಿಂದ
ನಿಮ್ಮ ಒಪ್ಪಂದಗಳು ಸದ್ದಿಲ್ಲದೆ
ಸುಟ್ಟು ಬೂದಿಯಾದಾವು.
ಹಸಿದ ಅವಳ ಕಂದಮ್ಮಗಳ
ಸಿಟ್ಟು ತಿರುಗಿ ಬಿದ್ದರೆ ನಿಮ್ಮ
ಒಪ್ಪಂದಗಳು ಹರಿದು ಚಿಂದಿಯಾದಾವು.
ನನ್ನ ಹಡೆದವ್ವನ ನೋವುಗಳು,
ಅವಳ ಕಣ್ಣೀರಿನಲಿ ತೋಯ್ದು,
ಶೃಂಖಲೆಯ ಗುಲಾಮಿ ಚರಿತ್ರೆಯನು
ಅಳಿಸಿ ಹಾಕಿ – ಹೊಸ ಚರಿತ್ರೆ
ರಚಿಸಿಯಾಳು ಅವಳ ರಕ್ತದಿಂದ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...