ಜನರ ಹತ್ತಿರ ಬನ್ನಿ

ಬಡವರುದ್ಧಾರದ ಮಾತುಗಳನ್ನುದುರಿಸಿ,
ದಿನದಿನಕ್ಕೆ ಬೆಳೆದಂತಹ ಕುಬೇರರೆ,
ಬಡವರಿಗಾಗಿ ಆಶ್ರಯ, ಹುಡ್ಕೋ, ಯೋಜನೆ
ನಿಮಗಾಗಿ ಮುಗಿಲೆತ್ತರದ
ಬಂಗ್ಲೆಗಳನ್ನು ಕಟ್ಟಿಸಿಕೊಂಡವರೆ,
ಬಡವರಿಗೆ ಭಜನೆ ಮಾಡಲು ಗುಡಿಕಟ್ಟಿಸಿ
ನಿಮಗಾಗಿ ಪಂಚತಾರಾ ಕಟ್ಟಿಸಿಕೊಂಡವರೆ,
ಬಡವರಿಗೆ ದೇಶಾಭಿಮಾನದ ಮಂತ್ರ ಹೇಳಿ
ಗ್ಯಾಟ್, ಡಂಕೆಲ್ ಒಪ್ಪಂದಗಳಿಗೆ ಸಹಿ ಹಾಕಿದವರೇ,
ಸಾಮ್ರಾಜ್ಯಶಾಹಿಗಳಿಗೆ
ದೇಶವನ್ನೇ ಅಡವಿಟ್ಟ ಭೂಪರೆ ?
ದೇಶದ ಸ್ವಾಯತ್ತತೆ, ಸ್ವಾವಲಂಬನೆಯ
ಮಾತುಗಳನ್ನುದುರಿಸುತ್ತಾ
ಉದಾರೀಕರಣ – ನೆಪದಲ್ಲಿ
ದೇಶವನ್ನು ಅತಂತ್ರದ
ಸಂಕೋಲೆಯಲಿ ಸಿಕ್ಕಿಸಿದವರೆ
ಜನತೆಯ ಕಷ್ಟಗಳನ್ನು
ಸಂದರ್ಶನದ ಮೈಕ್, ಟಿ.ವಿ.
ಕ್ಯಾಮರಾಗಳಿಗೆ ಸೀಮಿತಗೊಳಿಸಿದವರೆ,
ಹಿಟ್ಲರನ ಇತಿಹಾಸ ರಚಿಸದಿರಿ
ಬ್ರೇವೆರಿಜ್‌ಳ ಭ್ರೂಣಕ್ಕೆ ಬೆಳೆಸದಿರಿ
ಜನತೆಯ ಮನಗಳ ಮುರಿಯದಿರಿ
ಮಹಾತ್ಮರ ಕೊಲ್ಲುವ ಗೋಡ್ಸೆಯಾಗದಿರಿ
ಬನ್ನಿ ನಿಮ್ಮ ಜನರ ಹತ್ತಿರ ಬನ್ನಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರಿದರ್ಥಕಾಮದ ಮರವುಳ್ಳವುದೆಂತು?
Next post ಮಾರುತಿ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…