ಜನರ ಹತ್ತಿರ ಬನ್ನಿ

ಬಡವರುದ್ಧಾರದ ಮಾತುಗಳನ್ನುದುರಿಸಿ,
ದಿನದಿನಕ್ಕೆ ಬೆಳೆದಂತಹ ಕುಬೇರರೆ,
ಬಡವರಿಗಾಗಿ ಆಶ್ರಯ, ಹುಡ್ಕೋ, ಯೋಜನೆ
ನಿಮಗಾಗಿ ಮುಗಿಲೆತ್ತರದ
ಬಂಗ್ಲೆಗಳನ್ನು ಕಟ್ಟಿಸಿಕೊಂಡವರೆ,
ಬಡವರಿಗೆ ಭಜನೆ ಮಾಡಲು ಗುಡಿಕಟ್ಟಿಸಿ
ನಿಮಗಾಗಿ ಪಂಚತಾರಾ ಕಟ್ಟಿಸಿಕೊಂಡವರೆ,
ಬಡವರಿಗೆ ದೇಶಾಭಿಮಾನದ ಮಂತ್ರ ಹೇಳಿ
ಗ್ಯಾಟ್, ಡಂಕೆಲ್ ಒಪ್ಪಂದಗಳಿಗೆ ಸಹಿ ಹಾಕಿದವರೇ,
ಸಾಮ್ರಾಜ್ಯಶಾಹಿಗಳಿಗೆ
ದೇಶವನ್ನೇ ಅಡವಿಟ್ಟ ಭೂಪರೆ ?
ದೇಶದ ಸ್ವಾಯತ್ತತೆ, ಸ್ವಾವಲಂಬನೆಯ
ಮಾತುಗಳನ್ನುದುರಿಸುತ್ತಾ
ಉದಾರೀಕರಣ – ನೆಪದಲ್ಲಿ
ದೇಶವನ್ನು ಅತಂತ್ರದ
ಸಂಕೋಲೆಯಲಿ ಸಿಕ್ಕಿಸಿದವರೆ
ಜನತೆಯ ಕಷ್ಟಗಳನ್ನು
ಸಂದರ್ಶನದ ಮೈಕ್, ಟಿ.ವಿ.
ಕ್ಯಾಮರಾಗಳಿಗೆ ಸೀಮಿತಗೊಳಿಸಿದವರೆ,
ಹಿಟ್ಲರನ ಇತಿಹಾಸ ರಚಿಸದಿರಿ
ಬ್ರೇವೆರಿಜ್‌ಳ ಭ್ರೂಣಕ್ಕೆ ಬೆಳೆಸದಿರಿ
ಜನತೆಯ ಮನಗಳ ಮುರಿಯದಿರಿ
ಮಹಾತ್ಮರ ಕೊಲ್ಲುವ ಗೋಡ್ಸೆಯಾಗದಿರಿ
ಬನ್ನಿ ನಿಮ್ಮ ಜನರ ಹತ್ತಿರ ಬನ್ನಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರಿದರ್ಥಕಾಮದ ಮರವುಳ್ಳವುದೆಂತು?
Next post ಮಾರುತಿ

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys