ತಂಗಾಳಿ

ಆಗಸದಷ್ಟು ವಿಶಾಲ ಹೆಣ್ಣುಗಳ
ಹೃದಯಾಂತರದ ನೋವಿನ ಹರವು
ಹೆಜ್ಜೆ ಹೆಜ್ಜೆಗೂ ಕಟ್ಟಳೆಗಳ
ಬಂಧಿನಿ – ಕಣ್ಣಿದ್ದು ಮೈತುಂಬಾ
ಎಚ್ಚರವಹಿಸಿ – ಶೋಧಿಸಿ – ಪರೀಕ್ಷಿಸಿ
ಒಂದೊಂದೇ ಹೆಜ್ಜೆ ಮುಂದಿಟ್ಟಾಗ
ಚಿಗುರನು ಚಿವುಟುವ ಕೈಗಳು
ಮೈ ಮೇಲೆ ಸಾವಿರಾರು ಗಾಯಗಳು.

ಶ್ರಾವಣದ ಮಳೆಯಲಿ ತೋಯ್ದು
ಹರಿದು ಹೊಳೆಯಾಗಿ ಸಾಗುವ
ಅವಳ ಬಿಸಿ‌ಉಸಿರು, ಕಂಬನಿಗಳು,
ರಂಗಮಹಲಿನ ಏಕಾ೦ತ ಕೋಣೆಯಲಿ
ಸದ್ದಿಲ್ಲದೇ ಬಿದ್ದಿರುವ ಕೈದಿಗಳು.

ನೋವಿನ ಕುಲುಮೆಯಲಿ
ಕುದಿ ಕುದಿದು ಹೊರಬರುವ
ಕೆಂಡದುಂಡೆಗಳಂತಹ ಕವನಗಳು
ಸಿಡಿದರೆ ಕಿಡಿಗಳಾದಾವು – ಪ್ರೀತಿಯ
ಸಿಂಚನದಲಿ – ತಂಗಾಳಿಯಾದಾವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿ ಕಷ್ಟವೆನಲೆಷ್ಟು ನಷ್ಟವೋ ಮನುಜರಿಗೆ?
Next post ಇಷ್ಟ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

cheap jordans|wholesale air max|wholesale jordans|wholesale jewelry|wholesale jerseys