Home / ಲೇಖನ / ವಿಜ್ಞಾನ / ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಕೀಟಗಳು

ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಕೀಟಗಳು

ಪ್ಲಾಸ್ಟಿಕ್ ಮಾಯೆ ಎಂಥಹ ಅಪಾಯಕಾರಿ ಎಂಬುವುದು ಎಲ್ಲರಿಗೂ ಗೊತ್ತು. ದನಕರುಗಳಿಗೆ ತೊಂದರೆ, ನೀರನ ಹರಿವಿಗೆ ತಡೆ, ಬೆಳೆಗಳ ಬೇರುಗಳಿಗೆ ತೊಂದರೆ ಅಲ್ಲದೇ ಇವುಗಳಿಂದ ಪರಿಸರಮಾಲಿನ್ಯ ಕೂಡಾ ಯತೆಚ್ಚೆವಾಗಿ ಆಗಿ ಮಾನವನಿಗೆ ಮಾರಕವಾಗುವ ವಿಷಯ ತಿಳಿದಿದೆ. ದನಗಳು ತಿಂದರೆ ಸತ್ತುಹೋಗುತ್ತವೆ, ಮನುಷ್ಯ ತಿಂದರೆ ಕರುಳನ್ನು ಸುತ್ತಿಸಿಕೊಂಡು ಮರಣ ಅಪ್ಪುತ್ತಾನೆ. ಭೂಮಿಯಲ್ಲಿ ಹೂತರೆ ನೂರಿನ್ನೂರು ವರ್ಷವಾದರೂ ಕರಗದೇ ಇರುತ್ತದೆ. ಇವುಗಳನ್ನು ಸುಟ್ಟುಹಾಕಿದರೆ ಇದರಿಂದ ಉತ್ಪತ್ತಿಯಾಗುವ ಅಪಾಯಕಾರಿ ಹೊಗೆ (ಇಂಗಾಲ ಡೈ ಆಕ್ಸೈಡ್) ಯು ಮನುಷ್ಯನ ಉಸಿರಾಟವನ್ನೇ ನಿಲ್ಲಿಸಿ ಬಿಡುತ್ತದೆ. ಇಂಥಹ ಅಪಾಯಕಾರಿ ಪಾಲಿಥಿನನ್ನೇ ತಡೆಹಿಡಿಯಬೇಕೆಂದು ಸರಕಾರ ಆಜ್ಞೆ ಹೊರಡಿಸಿದರೂ ಸಫಲವಾಗಲಿಲ್ಲ. ಪ್ರಜ್ಞಾವಂತ ಜನರು ಇದನ್ನು ಅರ್ಥಮಾಡಿಕೊಳ್ಳದೇ ಈ ಮಾಯೆಗೆ ಮರುಳಾಗಿದ್ದಾರೆ.

ಇಂಥಹ ಸಂದರ್ಭದಲ್ಲಿ ಛತ್ತೀಸಗಡದ ಯುವ ವಿಜ್ಞಾನಿ ಅವಧಿಯ ಎಂಬುವರು ಸೊಸೈಟಿ ಫಾರ್ ಪಾರ್‍ಥೆನಿಯಂ ಮ್ಯಾನೋಜಮೆಂಟ್ ಸಂಯೋಜಕರಾಗಿದ್ದುಕೊಂಡು ಈ ಪ್ಲಾಸ್ಟಿಕನ್ನು ತಿಂದು ಅರಗಿಸಿಕೊಳ್ಳಬಲ್ಲ ಕೀಟಗಳನ್ನು ಪತ್ತೆಹಚ್ಚಿದ್ದಾರೆ. ೧೩೫ ಕೀಟಗಳ ಮೇಲೆ ಪ್ರಯೋಗ ನಡಿಸಿದ (೨ ವರ್ಷ) ‘ಅವಧಿಯಾ’ ಎಂಬ ವಿಜ್ಞಾನಿ ಇವುಗಳಲ್ಲಿ ೫ ಕೀಟಗಳು ಈ ಪಾಲಿಥಿನನ್ನು ತಿಂದು ಅರಗಿಸಿಕೊಳ್ಳಬಲ್ಲದೆಂದು ದೃಢೀಕರಿಸಿದ್ದಾರೆ. ಈ ‘ಪ್ಲಾಸ್ಬಿಕ್ ಬಗ್’ ಅನ್ನು ತಾನು ೧೯೯೯ರಲ್ಲಿ ಕಂಡು ಹಿಡಿದಿದ್ದಾಗಿ ಹೇಳಿದ್ದಾರೆ. ಚಳಿಗಾಲದಲ್ಲಿ ಈ ಕೀಟಗಳು ರೈತನಿಗೆ ಮಿತ್ರನಂತೆ ಇರುತ್ತವೆ ಎಂದೂ ಹೇಳಿದ್ದಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...