Home / ಲೇಖನ / ವಿಜ್ಞಾನ / ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಕೀಟಗಳು

ಪ್ಲಾಸ್ಟಿಕ್ ತಿಂದು ಜೀರ್ಣಿಸಿಕೊಳ್ಳುವ ಕೀಟಗಳು

ಪ್ಲಾಸ್ಟಿಕ್ ಮಾಯೆ ಎಂಥಹ ಅಪಾಯಕಾರಿ ಎಂಬುವುದು ಎಲ್ಲರಿಗೂ ಗೊತ್ತು. ದನಕರುಗಳಿಗೆ ತೊಂದರೆ, ನೀರನ ಹರಿವಿಗೆ ತಡೆ, ಬೆಳೆಗಳ ಬೇರುಗಳಿಗೆ ತೊಂದರೆ ಅಲ್ಲದೇ ಇವುಗಳಿಂದ ಪರಿಸರಮಾಲಿನ್ಯ ಕೂಡಾ ಯತೆಚ್ಚೆವಾಗಿ ಆಗಿ ಮಾನವನಿಗೆ ಮಾರಕವಾಗುವ ವಿಷಯ ತಿಳಿದಿದೆ. ದನಗಳು ತಿಂದರೆ ಸತ್ತುಹೋಗುತ್ತವೆ, ಮನುಷ್ಯ ತಿಂದರೆ ಕರುಳನ್ನು ಸುತ್ತಿಸಿಕೊಂಡು ಮರಣ ಅಪ್ಪುತ್ತಾನೆ. ಭೂಮಿಯಲ್ಲಿ ಹೂತರೆ ನೂರಿನ್ನೂರು ವರ್ಷವಾದರೂ ಕರಗದೇ ಇರುತ್ತದೆ. ಇವುಗಳನ್ನು ಸುಟ್ಟುಹಾಕಿದರೆ ಇದರಿಂದ ಉತ್ಪತ್ತಿಯಾಗುವ ಅಪಾಯಕಾರಿ ಹೊಗೆ (ಇಂಗಾಲ ಡೈ ಆಕ್ಸೈಡ್) ಯು ಮನುಷ್ಯನ ಉಸಿರಾಟವನ್ನೇ ನಿಲ್ಲಿಸಿ ಬಿಡುತ್ತದೆ. ಇಂಥಹ ಅಪಾಯಕಾರಿ ಪಾಲಿಥಿನನ್ನೇ ತಡೆಹಿಡಿಯಬೇಕೆಂದು ಸರಕಾರ ಆಜ್ಞೆ ಹೊರಡಿಸಿದರೂ ಸಫಲವಾಗಲಿಲ್ಲ. ಪ್ರಜ್ಞಾವಂತ ಜನರು ಇದನ್ನು ಅರ್ಥಮಾಡಿಕೊಳ್ಳದೇ ಈ ಮಾಯೆಗೆ ಮರುಳಾಗಿದ್ದಾರೆ.

ಇಂಥಹ ಸಂದರ್ಭದಲ್ಲಿ ಛತ್ತೀಸಗಡದ ಯುವ ವಿಜ್ಞಾನಿ ಅವಧಿಯ ಎಂಬುವರು ಸೊಸೈಟಿ ಫಾರ್ ಪಾರ್‍ಥೆನಿಯಂ ಮ್ಯಾನೋಜಮೆಂಟ್ ಸಂಯೋಜಕರಾಗಿದ್ದುಕೊಂಡು ಈ ಪ್ಲಾಸ್ಟಿಕನ್ನು ತಿಂದು ಅರಗಿಸಿಕೊಳ್ಳಬಲ್ಲ ಕೀಟಗಳನ್ನು ಪತ್ತೆಹಚ್ಚಿದ್ದಾರೆ. ೧೩೫ ಕೀಟಗಳ ಮೇಲೆ ಪ್ರಯೋಗ ನಡಿಸಿದ (೨ ವರ್ಷ) ‘ಅವಧಿಯಾ’ ಎಂಬ ವಿಜ್ಞಾನಿ ಇವುಗಳಲ್ಲಿ ೫ ಕೀಟಗಳು ಈ ಪಾಲಿಥಿನನ್ನು ತಿಂದು ಅರಗಿಸಿಕೊಳ್ಳಬಲ್ಲದೆಂದು ದೃಢೀಕರಿಸಿದ್ದಾರೆ. ಈ ‘ಪ್ಲಾಸ್ಬಿಕ್ ಬಗ್’ ಅನ್ನು ತಾನು ೧೯೯೯ರಲ್ಲಿ ಕಂಡು ಹಿಡಿದಿದ್ದಾಗಿ ಹೇಳಿದ್ದಾರೆ. ಚಳಿಗಾಲದಲ್ಲಿ ಈ ಕೀಟಗಳು ರೈತನಿಗೆ ಮಿತ್ರನಂತೆ ಇರುತ್ತವೆ ಎಂದೂ ಹೇಳಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...