Home / ಲೇಖನ / ಪುಸ್ತಕ / ಪಾಪಿಯೂ – ಅರಿಕೆ

ಪಾಪಿಯೂ – ಅರಿಕೆ

“ಚಕ್ಖುಪಾಲ ಮಹಾತೇರ” ಮತ್ತು “ಪಾಪಿ”ಯ ಮೂಲ ಬುದ್ಧಘೋಷನ ಜಾತಕ ಕತೆಗಳು (ಬರ್‍ಮಿ ಭಾಷೆಯಿಂದ ಇಂಗ್ಲೀಷಿಗೆ ಕ್ಯಾಪ್ಟನ್ ಟಿ. ರೋಜರ್ಸ್), “ಜುಲೇಖ”, “ರುದಾಕಿ” ಮತ್ತು “ಫಿರ್ದೌಸಿ”ಯು ಹಿಂದೆ ಅರಬ್ಬಿ ಮತ್ತು ಪರ್ಶಿಯನ್ ಸಾಹಿತ್ಯದ ವಿವಿಧ ಕೃತಿಗಳಿವೆ. “ಸುಲೇಮಾನ”ದ ಹಲವು ವಿವರಗಳನ್ನು ಬೈಬಲಿನ ಹಳೆ ಒಡಂಬಡಿಕೆ, ಆಂದ್ರೆ ಮಾಲ್ರೋನ Anti-Memoirs ಮತ್ತು ಐಸಾಕ್ ರೋಸೆನ್ ಫೀಲ್ಡನ ಸಣ್ಣ ಕತೆಯೊಂದರಿಂದ ತೆಗೆದುಕೊಳ್ಳಲಾಗಿದೆ. ರಿಸರ್ಡ್ ಹ್ಯಾರಿಸ್‌ನ Death of a Revolutionary ಎಂಬ ಪುಸ್ತಕ “ಬೊಲೀವಿಯಾದಲ್ಲಿ ಚೆ”ಯ ರಚನೆಗೆ ಕಾರಣ. “ಇಮಾಂ ಬಾರಾ”ಕ್ಕೆ ವಿವರಗಳನ್ನೊದಗಿಸಿದ್ದು ಅಬ್ದುಲ್ ಹಲೀಮ್ ಶರಾರರ Lucknow : The Last phase of an Oriental Culture (ಇಂಗ್ಲೀಷಿಗೆ ಇ ಎಸ್. ಹಾರ್ಕೋರ್ಟ್ ಮತ್ತು ಫಕೀರ್ ಹುಸೇನ್) ಎಂಬ ಕೃತಿ. “ರುಗ್ಣ ಯಾಕುಬ”, “ದೇವರು ದೊಡ್ಡವ”, “ಅಲ್ಲಾ ನಿದ್ರಿಸುತಾನೆ ಇಲ್ಲಾ”, “ಖೂನಿ”, “ಬಾಲ್ತ ಸ್ಹಾರ್! ಬಾಲ್ತ ಸ್ಹಾರ್!” ಮತ್ತು “ಜೂಲಿಯಾನ” ಅರ್ಜೆಂಟೀನಾದ ಸಾಹಿತಿ ಜೋರ್ಜ್ ಲೂಯಿ ಬೋರ್‍ಹೆಸ್‌ನ ಕತೆಗಳನ್ನೋದಿ ಬರೆದುವು. ಈ ಕವಿತೆಗಳನ್ನು ಬರೆಯುವಾಗ ಆಗತ್ಯವೆನಿಸಿದ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. “ರುದಾಕಿ” ಕವಿತೆಯಲ್ಲಿ ಬರುವ ನಾವಿಕನ ಕತೆಗೆ ಆಧಾರ ನನ್ನದೇ ಕಿರುಕಾದಂಬರಿ ಅನೇಕ. ಇಲ್ಲಿಯೂ ಕತೆ ವ್ಯತ್ಯಾಸಗೊಂಡಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...