Home / ಲೇಖನ / ಪುಸ್ತಕ / ಪಾಪಿಯೂ – ಅರಿಕೆ

ಪಾಪಿಯೂ – ಅರಿಕೆ

“ಚಕ್ಖುಪಾಲ ಮಹಾತೇರ” ಮತ್ತು “ಪಾಪಿ”ಯ ಮೂಲ ಬುದ್ಧಘೋಷನ ಜಾತಕ ಕತೆಗಳು (ಬರ್‍ಮಿ ಭಾಷೆಯಿಂದ ಇಂಗ್ಲೀಷಿಗೆ ಕ್ಯಾಪ್ಟನ್ ಟಿ. ರೋಜರ್ಸ್), “ಜುಲೇಖ”, “ರುದಾಕಿ” ಮತ್ತು “ಫಿರ್ದೌಸಿ”ಯು ಹಿಂದೆ ಅರಬ್ಬಿ ಮತ್ತು ಪರ್ಶಿಯನ್ ಸಾಹಿತ್ಯದ ವಿವಿಧ ಕೃತಿಗಳಿವೆ. “ಸುಲೇಮಾನ”ದ ಹಲವು ವಿವರಗಳನ್ನು ಬೈಬಲಿನ ಹಳೆ ಒಡಂಬಡಿಕೆ, ಆಂದ್ರೆ ಮಾಲ್ರೋನ Anti-Memoirs ಮತ್ತು ಐಸಾಕ್ ರೋಸೆನ್ ಫೀಲ್ಡನ ಸಣ್ಣ ಕತೆಯೊಂದರಿಂದ ತೆಗೆದುಕೊಳ್ಳಲಾಗಿದೆ. ರಿಸರ್ಡ್ ಹ್ಯಾರಿಸ್‌ನ Death of a Revolutionary ಎಂಬ ಪುಸ್ತಕ “ಬೊಲೀವಿಯಾದಲ್ಲಿ ಚೆ”ಯ ರಚನೆಗೆ ಕಾರಣ. “ಇಮಾಂ ಬಾರಾ”ಕ್ಕೆ ವಿವರಗಳನ್ನೊದಗಿಸಿದ್ದು ಅಬ್ದುಲ್ ಹಲೀಮ್ ಶರಾರರ Lucknow : The Last phase of an Oriental Culture (ಇಂಗ್ಲೀಷಿಗೆ ಇ ಎಸ್. ಹಾರ್ಕೋರ್ಟ್ ಮತ್ತು ಫಕೀರ್ ಹುಸೇನ್) ಎಂಬ ಕೃತಿ. “ರುಗ್ಣ ಯಾಕುಬ”, “ದೇವರು ದೊಡ್ಡವ”, “ಅಲ್ಲಾ ನಿದ್ರಿಸುತಾನೆ ಇಲ್ಲಾ”, “ಖೂನಿ”, “ಬಾಲ್ತ ಸ್ಹಾರ್! ಬಾಲ್ತ ಸ್ಹಾರ್!” ಮತ್ತು “ಜೂಲಿಯಾನ” ಅರ್ಜೆಂಟೀನಾದ ಸಾಹಿತಿ ಜೋರ್ಜ್ ಲೂಯಿ ಬೋರ್‍ಹೆಸ್‌ನ ಕತೆಗಳನ್ನೋದಿ ಬರೆದುವು. ಈ ಕವಿತೆಗಳನ್ನು ಬರೆಯುವಾಗ ಆಗತ್ಯವೆನಿಸಿದ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. “ರುದಾಕಿ” ಕವಿತೆಯಲ್ಲಿ ಬರುವ ನಾವಿಕನ ಕತೆಗೆ ಆಧಾರ ನನ್ನದೇ ಕಿರುಕಾದಂಬರಿ ಅನೇಕ. ಇಲ್ಲಿಯೂ ಕತೆ ವ್ಯತ್ಯಾಸಗೊಂಡಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...