ದೇವರು ದೊಡ್ಡವ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಅಲ್ಲವೆ ಮತ್ತೆ
ಮುಂದೆ ಹೋದರು ಕತ್ತೆ
ಹಿಂದೆ ಬಂದರು ಕತ್ತೆ
ಕತ್ತೆಯೇ
ಹಾಗೆಯೇ ಆವತ್ತು
ಅಂಥ ಕತೆ ಕೇಳಿ
ಅಂಥ ಕತೆಯೇ ಅಥವ
ದಂತ ಕತೆಯೇ
ಆಹ ! ಅವನೇ ಬಂದ
ಖದೀಮ
ಹೆಸರು ಮಾತ್ರ ಹಕೀಮ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಕಾಲ ಕ್ರಿಸ್ತಶಕ
ಒಂದು ಸಾವಿರ ವರುಷ
ಜಾಗ ಕೈರೋ ಎಂಬ ದೇಶ
ಅವರೂ ಖಲೀಫರೇ
ಬರುತಾರೆ ಕೆಲವು ಸಲ
ಗರೀಬ ಫಕೀರನ ಹಾಗೆ
ಬರುತಾರೆ ಕೆಲವು ಸಲ
ತಳವಾರನ ವೇಷ

ಇಂಥಾ ಹೊತ್ತಿಗೆ
ಕುಂಟರ ಕುರುಡರ ಪರವೂರವರ
ಸಂತರ ಶ್ರೀಮಂತರ ನಂಬುವುದಾದರು ಹೇಗೆ !

ಮಾರನೆ ದಿನ
ಸೆರೆಮನೆಯಲಿ ಹತ್ತು ಜನ
ಹೆಚ್ಚಿದರೂ ಹೆಚ್ಚೀತು
ಐದಾರು ಹೆಣ
ಕೊಚ್ಚಿದರೂ ಕೊಚ್ಚೀತು

ಹೀಗಿತ್ತವನ
ಹೀಗಿದ್ದವನ
ಹೀಗೇ ಒಂದು ದಿನ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ನಾವು ಮಸೀದಿಯ ಮೆಟ್ಟಿಲ ಮೇಲೆ
ಸುಮ್ಮನೆ ನೋಡುತ್ತ
ಅಂಗಡಿ ಕಣಗಳು ಕೂಡ
ಅರ್ಧಕ್ಕೆ ತೆರೆಯುತ್ತ
ಇನ್ನೂ ಕೆಲವರು ಹುಕ್ಕದ ಸುತ್ತ
ಕತೆಗಳ ಹೇಳುತ್ತ

ಹತ್ತು ಜನ ಹೊಂತಗಾರರು
ಹೀಗೇ ಹಾದಿ ನಡೆದಿದ್ದಾರೆ
ಒಬ್ಬಾನೊಬ, ವ್ಯಾಪಾರಿ
ಜತೆಗೇ ಬರುವುದ
ಕಂಡಿದಾರೆ.
ತಲೆಗೇನೋ ಹೊಳೆದಂತಾಗಿ
ತಟ್ಟನೆ ತಿರುಗಿ ನಿಂತಿದ್ದಾರೆ

“ಸಲಾಂ ಖಲೀಫರ
ಅನಕಾ ದೂರ
ಬರಿಗಾಲಲ್ಲೆ ಬಂದಿದ್ದೀರ !
ಏನ ನಡೆಸೀರಿ
ವ್ಯಾಪಾರ ?”

ಎಂದರು-ಹತ್ತಿರ
ಹತ್ತಿರ ಬಂದರು, ಹತ್ತೂ ಮಂದಿ
ಸುತ್ತ ಮುತ್ತ ಯಾರಿಲ್ಲ
ಬಿಟ್ಟರೆ ಬೀದಿಯ ಹಂದಿ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ
“ಆಹ ! ಏನಂದಿರಿ-
ವ್ಯಾಪಾರ ?
ಅದೂ ಪರವಾಯಿಲ್ಲ!
ಇದೋ!” ಎಂದರು ಖಾವಂದರು
ಮುಷ್ಟಿ ದಿನಾರವ ತೆಗೆದು

ಅವು ಅಂಗೈ ತುಂಬಾ ಹೊಳೆದು
ಸಂಜೆಯ ಸೂರ್ಯನ ಕಿರಣ
ಹೆಕ್ಕಿದುವೊಂದನು ಬಿಡದೆ
ನೋಡದೆ ಬೇರೆ ಕಡೆ

“ಯಾರಿಗೆ ಇವು
ಯಾರಿಗೆ ಹೇಳಿ-
ಕಪ್ಪು ಸಮುದ್ರವ
ಕುಡಿದಾತನಿಗೆ
ಕೆಂಪು ಸಮುದ್ರವ
ಹಿಡಿದಾತನಿಗೆ
ಕೊನೆ ತನಕವು
ಉಳಿವಾತನಿಗೆ !”

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಎಲ್ಲರು ಬಿದ್ದಿದ್ದರು-ಒಬ್ಬ ಮಾತ್ರವೇ
ಎದ್ದು ನಿಂತಿದ್ದ
ಅವ ಖಲೀಫರ ಸಮ್ಮುಖ
ಬಂದು ನಿಂತಿದ್ದ

“ಏನ ನೋಡತಿ, ಮಗನೇ ?
ಕೊನೆಗೂ ಗೆದ್ದವ ನೀನೇ-
ನಮ್ಮ ಕಾಲಿಗೆ ಬಿದ್ದು
ತಗೊ ನಿನ್ನ ನಿಧಿಯನು ನೀನೇ !”

ಆಮೇಲಿನ ಕತೆ
ಗೊತ್ತಿದ್ದದ್ದೇ-
ದೇವರು ದೊಡ್ಡವ ಗೆದ್ದೇ-
ನೆಂದು ಮನಸಿನ ಒಳಗೇ
ನೆತ್ತರ ಒರೆಸಿ
ಖಡ್ಗವ ಮರೆಸಿ
ನಡೆದರು ಮೊದಲಿನ ಹಾಗೇ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂಕ್ಷ್ಮ ತರಂಗಗಳ ಒಲೆ
Next post ನರನ ಆಶೆ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…