Home / ಕವನ / ನೀಳ್ಗವಿತೆ / ದೇವರು ದೊಡ್ಡವ

ದೇವರು ದೊಡ್ಡವ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಅಲ್ಲವೆ ಮತ್ತೆ
ಮುಂದೆ ಹೋದರು ಕತ್ತೆ
ಹಿಂದೆ ಬಂದರು ಕತ್ತೆ
ಕತ್ತೆಯೇ
ಹಾಗೆಯೇ ಆವತ್ತು
ಅಂಥ ಕತೆ ಕೇಳಿ
ಅಂಥ ಕತೆಯೇ ಅಥವ
ದಂತ ಕತೆಯೇ
ಆಹ ! ಅವನೇ ಬಂದ
ಖದೀಮ
ಹೆಸರು ಮಾತ್ರ ಹಕೀಮ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಕಾಲ ಕ್ರಿಸ್ತಶಕ
ಒಂದು ಸಾವಿರ ವರುಷ
ಜಾಗ ಕೈರೋ ಎಂಬ ದೇಶ
ಅವರೂ ಖಲೀಫರೇ
ಬರುತಾರೆ ಕೆಲವು ಸಲ
ಗರೀಬ ಫಕೀರನ ಹಾಗೆ
ಬರುತಾರೆ ಕೆಲವು ಸಲ
ತಳವಾರನ ವೇಷ

ಇಂಥಾ ಹೊತ್ತಿಗೆ
ಕುಂಟರ ಕುರುಡರ ಪರವೂರವರ
ಸಂತರ ಶ್ರೀಮಂತರ ನಂಬುವುದಾದರು ಹೇಗೆ !

ಮಾರನೆ ದಿನ
ಸೆರೆಮನೆಯಲಿ ಹತ್ತು ಜನ
ಹೆಚ್ಚಿದರೂ ಹೆಚ್ಚೀತು
ಐದಾರು ಹೆಣ
ಕೊಚ್ಚಿದರೂ ಕೊಚ್ಚೀತು

ಹೀಗಿತ್ತವನ
ಹೀಗಿದ್ದವನ
ಹೀಗೇ ಒಂದು ದಿನ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ನಾವು ಮಸೀದಿಯ ಮೆಟ್ಟಿಲ ಮೇಲೆ
ಸುಮ್ಮನೆ ನೋಡುತ್ತ
ಅಂಗಡಿ ಕಣಗಳು ಕೂಡ
ಅರ್ಧಕ್ಕೆ ತೆರೆಯುತ್ತ
ಇನ್ನೂ ಕೆಲವರು ಹುಕ್ಕದ ಸುತ್ತ
ಕತೆಗಳ ಹೇಳುತ್ತ

ಹತ್ತು ಜನ ಹೊಂತಗಾರರು
ಹೀಗೇ ಹಾದಿ ನಡೆದಿದ್ದಾರೆ
ಒಬ್ಬಾನೊಬ, ವ್ಯಾಪಾರಿ
ಜತೆಗೇ ಬರುವುದ
ಕಂಡಿದಾರೆ.
ತಲೆಗೇನೋ ಹೊಳೆದಂತಾಗಿ
ತಟ್ಟನೆ ತಿರುಗಿ ನಿಂತಿದ್ದಾರೆ

“ಸಲಾಂ ಖಲೀಫರ
ಅನಕಾ ದೂರ
ಬರಿಗಾಲಲ್ಲೆ ಬಂದಿದ್ದೀರ !
ಏನ ನಡೆಸೀರಿ
ವ್ಯಾಪಾರ ?”

ಎಂದರು-ಹತ್ತಿರ
ಹತ್ತಿರ ಬಂದರು, ಹತ್ತೂ ಮಂದಿ
ಸುತ್ತ ಮುತ್ತ ಯಾರಿಲ್ಲ
ಬಿಟ್ಟರೆ ಬೀದಿಯ ಹಂದಿ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ
“ಆಹ ! ಏನಂದಿರಿ-
ವ್ಯಾಪಾರ ?
ಅದೂ ಪರವಾಯಿಲ್ಲ!
ಇದೋ!” ಎಂದರು ಖಾವಂದರು
ಮುಷ್ಟಿ ದಿನಾರವ ತೆಗೆದು

ಅವು ಅಂಗೈ ತುಂಬಾ ಹೊಳೆದು
ಸಂಜೆಯ ಸೂರ್ಯನ ಕಿರಣ
ಹೆಕ್ಕಿದುವೊಂದನು ಬಿಡದೆ
ನೋಡದೆ ಬೇರೆ ಕಡೆ

“ಯಾರಿಗೆ ಇವು
ಯಾರಿಗೆ ಹೇಳಿ-
ಕಪ್ಪು ಸಮುದ್ರವ
ಕುಡಿದಾತನಿಗೆ
ಕೆಂಪು ಸಮುದ್ರವ
ಹಿಡಿದಾತನಿಗೆ
ಕೊನೆ ತನಕವು
ಉಳಿವಾತನಿಗೆ !”

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ…

ಎಲ್ಲರು ಬಿದ್ದಿದ್ದರು-ಒಬ್ಬ ಮಾತ್ರವೇ
ಎದ್ದು ನಿಂತಿದ್ದ
ಅವ ಖಲೀಫರ ಸಮ್ಮುಖ
ಬಂದು ನಿಂತಿದ್ದ

“ಏನ ನೋಡತಿ, ಮಗನೇ ?
ಕೊನೆಗೂ ಗೆದ್ದವ ನೀನೇ-
ನಮ್ಮ ಕಾಲಿಗೆ ಬಿದ್ದು
ತಗೊ ನಿನ್ನ ನಿಧಿಯನು ನೀನೇ !”

ಆಮೇಲಿನ ಕತೆ
ಗೊತ್ತಿದ್ದದ್ದೇ-
ದೇವರು ದೊಡ್ಡವ ಗೆದ್ದೇ-
ನೆಂದು ಮನಸಿನ ಒಳಗೇ
ನೆತ್ತರ ಒರೆಸಿ
ಖಡ್ಗವ ಮರೆಸಿ
ನಡೆದರು ಮೊದಲಿನ ಹಾಗೇ

ಖಲೀಫ ಹಕೀಮರ ಹೊಗಳಿ
ಮನೆ ಮನೆ ಬಾಗಿಲ ಅಗಳಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...