ಖೂನಿ

ಸುಲಭ ಅಥವಾ ಕಷ್ಟದ
ಮಾತಲ್ಲ-
ಅವ ಸುಮ್ಮನೇ ಕೂತಿದ್ದ
ಸಂಜೆಯೂ ಆಗುತ್ತ ಇತ್ತು
ಆಗಲೇ ಗಡಿಯಾರ
ಆರರ ಹತ್ತಿರ ಬಂದಿತ್ತು
ಎದ್ದು
ಕಿಟಕಿಯ ತೆರೆದು ಬಂದ
ಇದ್ದ
ಬೆಳಕೂ ಒಳ ಬಂತು
ಅದು
ನದೀ ಮೇಲಿಂದ ಬಂತು
* * *

ಅವ ಆರಾಮ ಕುರ್ಚಿಯಲಿ
ಇದ್ದಾನೆ
ಅವ ಈಗಲೇ
ಬರಲಿದ್ದಾನೆ
ನೆರೆಮನೆ ಪಾತ್ರೆಯ
ಸದ್ದು ? ಅಥವ
ಗೋಡೆಯ ಮೇಲಿಂದ ಬೆಕ್ಕು
ಕೆಳ ಹಾರಿದ್ದು ?
ಅಥವ ಯಾರೋ
ನೀರಿಗೆ ಬಿದ್ದು…
ಅವಸರವೇನು
ನಿಧಾನ
* * *

ಬಹುದಿನಗಳಿಂದಲೂ
ಒಬ್ಬ ಸಿಗರೇಟು ತೆಗೆದರೆ
ಇನ್ನೊಬ್ಬ ಕಡ್ಡಿಗೀರುವನು
ಹಾಗಿತ್ತು

ತುಸು ಸಂಗೀತವೂ ಇತ್ತು
ಅದು ಆಗೀಗ
ನೀರ ಝುರಿಯಂತೆ
ಹರಿದು ಬರುತಿತ್ತು
ಮುಂದೆ ಹೋದಂತೆ
ಹಿಂದೆಯೂ ಬರುತಿತ್ತು
ನದಿ ದಾಟಿದವರಿಗೆ
ಇದು ಗೊತ್ತು
ನದೀ ಮಧ್ಯದಲೇ
ತಲೆ ಸುತ್ತು
ಆಗ
* * *

ಆಗಲೇ ಆರು ಹೊಡೆಯಿತು
ಕೊನೇ ಉಗಿಬಂಡಿಯೂ
ವರ್ಧಿಸಿತು ವೇಗ
ಆಗಲೇ
ಅಸ್ಪಷ್ಟ ಬೆಳಕಿನಲಿ
ನೀ ಎದ್ದು ನಿಂತಿ
ಎರಡೂ ಕೈಯಲಿ ಕಲ್ಲ
ಎತ್ತಿ ಹೊಡೆದಿ
ಆಮೇಲೆ ಕಿಟಕಿಯ
ಹೊರಕ್ಕೆ ದೂಡಿದಿ
ಧಡ್ಡೆಂದು ಸದ್ದು
ಒಮ್ಮೆ ಕೇಳಿಸಿತು
ಉಗಿ ಬಂಡಿಯ ಸದ್ದು
ಅದನ್ನು ಅಳಿಸಿತ್ತು
* * *

ಅವ ಬಾಗಿಲ ಬಳಿ
ಹೋಗುವನು
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಬಾಗಿಲ
ತೆರೆಯುವನು

ಅವನೇ ! ಅವ
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಕಾಲ
ಮನೆಯೊಳಗೆ ಇರಿಸುವನು
* * *

“ಸಂಜೆಯ ಕಿಟಕಿ ?”
“ಹೌದು”
“ಸರಿಯಾದ ಕಡೆಗೆ”
“ನನ್ನದೆ ಯೋಚನೆ”
“ಆ ಕಲ್ಲು ?”
“ಅದೂ ನನ್ನದೆ”
“ಚೆನ್ನಾಗಿದೆ. ಕಬ್ಬಿಣ ಅಥವ…”
“ಯುರೇನಿಯದಂತೆ ?”
“ಬಹಳ ಭಾರವಿರಬೇಕು”
“ಇದೆ”
* * *

ಅವಸರದ ಮಾತಲ್ಲ
ಅದರ ಅಗತ್ಯವೂ ಇಲ್ಲ
ಒಂದೆರಡು ದಿನಗಳೆ ?
ಆರಾಮ ಕುರ್ಚಿಯಲಿ
ನೀನು ಕುಳಿತಿರುವಿ
ಬಾಗಿಲಿನ ಬಡಿತಕ್ಕೆ
ಎದ್ದು ಬರುವಿ
ಒಂದು ಕ್ಷಣ ಯೋಚನೆಗೆ
ಸಿಕ್ಕಿದಂತಿರುವಿ
ಆಮೇಲೆ ನಿಧಾನ
ತೆರೆದೇ ತೆರೆಯುವಿ
ಒದ್ದೆಯಾಗಿಲ್ಲ ಮೈ
ಒದ್ದೆಯಾಗಿಲ್ಲ ಕೂದಲೂ
ಆದರೂ
ಹಳೇ ಹಾವಸೆಯ ವಾಸನೆ
ಮತ್ತೊಮ್ಮೆ ನಾನು
ಒಳಕ್ಕೆ ಕಾಲಿಡುವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ೫೦ ವರ್ಷ ಬಳೆಸಬಹುದಾದ ಬ್ಯಾಟರಿ
Next post ಬಾರಯ್ಯಾ

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…