Home / ಕವನ / ಕವಿತೆ / ಖೂನಿ

ಖೂನಿ

ಸುಲಭ ಅಥವಾ ಕಷ್ಟದ
ಮಾತಲ್ಲ-
ಅವ ಸುಮ್ಮನೇ ಕೂತಿದ್ದ
ಸಂಜೆಯೂ ಆಗುತ್ತ ಇತ್ತು
ಆಗಲೇ ಗಡಿಯಾರ
ಆರರ ಹತ್ತಿರ ಬಂದಿತ್ತು
ಎದ್ದು
ಕಿಟಕಿಯ ತೆರೆದು ಬಂದ
ಇದ್ದ
ಬೆಳಕೂ ಒಳ ಬಂತು
ಅದು
ನದೀ ಮೇಲಿಂದ ಬಂತು
* * *

ಅವ ಆರಾಮ ಕುರ್ಚಿಯಲಿ
ಇದ್ದಾನೆ
ಅವ ಈಗಲೇ
ಬರಲಿದ್ದಾನೆ
ನೆರೆಮನೆ ಪಾತ್ರೆಯ
ಸದ್ದು ? ಅಥವ
ಗೋಡೆಯ ಮೇಲಿಂದ ಬೆಕ್ಕು
ಕೆಳ ಹಾರಿದ್ದು ?
ಅಥವ ಯಾರೋ
ನೀರಿಗೆ ಬಿದ್ದು…
ಅವಸರವೇನು
ನಿಧಾನ
* * *

ಬಹುದಿನಗಳಿಂದಲೂ
ಒಬ್ಬ ಸಿಗರೇಟು ತೆಗೆದರೆ
ಇನ್ನೊಬ್ಬ ಕಡ್ಡಿಗೀರುವನು
ಹಾಗಿತ್ತು

ತುಸು ಸಂಗೀತವೂ ಇತ್ತು
ಅದು ಆಗೀಗ
ನೀರ ಝುರಿಯಂತೆ
ಹರಿದು ಬರುತಿತ್ತು
ಮುಂದೆ ಹೋದಂತೆ
ಹಿಂದೆಯೂ ಬರುತಿತ್ತು
ನದಿ ದಾಟಿದವರಿಗೆ
ಇದು ಗೊತ್ತು
ನದೀ ಮಧ್ಯದಲೇ
ತಲೆ ಸುತ್ತು
ಆಗ
* * *

ಆಗಲೇ ಆರು ಹೊಡೆಯಿತು
ಕೊನೇ ಉಗಿಬಂಡಿಯೂ
ವರ್ಧಿಸಿತು ವೇಗ
ಆಗಲೇ
ಅಸ್ಪಷ್ಟ ಬೆಳಕಿನಲಿ
ನೀ ಎದ್ದು ನಿಂತಿ
ಎರಡೂ ಕೈಯಲಿ ಕಲ್ಲ
ಎತ್ತಿ ಹೊಡೆದಿ
ಆಮೇಲೆ ಕಿಟಕಿಯ
ಹೊರಕ್ಕೆ ದೂಡಿದಿ
ಧಡ್ಡೆಂದು ಸದ್ದು
ಒಮ್ಮೆ ಕೇಳಿಸಿತು
ಉಗಿ ಬಂಡಿಯ ಸದ್ದು
ಅದನ್ನು ಅಳಿಸಿತ್ತು
* * *

ಅವ ಬಾಗಿಲ ಬಳಿ
ಹೋಗುವನು
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಬಾಗಿಲ
ತೆರೆಯುವನು

ಅವನೇ ! ಅವ
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಕಾಲ
ಮನೆಯೊಳಗೆ ಇರಿಸುವನು
* * *

“ಸಂಜೆಯ ಕಿಟಕಿ ?”
“ಹೌದು”
“ಸರಿಯಾದ ಕಡೆಗೆ”
“ನನ್ನದೆ ಯೋಚನೆ”
“ಆ ಕಲ್ಲು ?”
“ಅದೂ ನನ್ನದೆ”
“ಚೆನ್ನಾಗಿದೆ. ಕಬ್ಬಿಣ ಅಥವ…”
“ಯುರೇನಿಯದಂತೆ ?”
“ಬಹಳ ಭಾರವಿರಬೇಕು”
“ಇದೆ”
* * *

ಅವಸರದ ಮಾತಲ್ಲ
ಅದರ ಅಗತ್ಯವೂ ಇಲ್ಲ
ಒಂದೆರಡು ದಿನಗಳೆ ?
ಆರಾಮ ಕುರ್ಚಿಯಲಿ
ನೀನು ಕುಳಿತಿರುವಿ
ಬಾಗಿಲಿನ ಬಡಿತಕ್ಕೆ
ಎದ್ದು ಬರುವಿ
ಒಂದು ಕ್ಷಣ ಯೋಚನೆಗೆ
ಸಿಕ್ಕಿದಂತಿರುವಿ
ಆಮೇಲೆ ನಿಧಾನ
ತೆರೆದೇ ತೆರೆಯುವಿ
ಒದ್ದೆಯಾಗಿಲ್ಲ ಮೈ
ಒದ್ದೆಯಾಗಿಲ್ಲ ಕೂದಲೂ
ಆದರೂ
ಹಳೇ ಹಾವಸೆಯ ವಾಸನೆ
ಮತ್ತೊಮ್ಮೆ ನಾನು
ಒಳಕ್ಕೆ ಕಾಲಿಡುವೆ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...