ಖೂನಿ

ಸುಲಭ ಅಥವಾ ಕಷ್ಟದ
ಮಾತಲ್ಲ-
ಅವ ಸುಮ್ಮನೇ ಕೂತಿದ್ದ
ಸಂಜೆಯೂ ಆಗುತ್ತ ಇತ್ತು
ಆಗಲೇ ಗಡಿಯಾರ
ಆರರ ಹತ್ತಿರ ಬಂದಿತ್ತು
ಎದ್ದು
ಕಿಟಕಿಯ ತೆರೆದು ಬಂದ
ಇದ್ದ
ಬೆಳಕೂ ಒಳ ಬಂತು
ಅದು
ನದೀ ಮೇಲಿಂದ ಬಂತು
* * *

ಅವ ಆರಾಮ ಕುರ್ಚಿಯಲಿ
ಇದ್ದಾನೆ
ಅವ ಈಗಲೇ
ಬರಲಿದ್ದಾನೆ
ನೆರೆಮನೆ ಪಾತ್ರೆಯ
ಸದ್ದು ? ಅಥವ
ಗೋಡೆಯ ಮೇಲಿಂದ ಬೆಕ್ಕು
ಕೆಳ ಹಾರಿದ್ದು ?
ಅಥವ ಯಾರೋ
ನೀರಿಗೆ ಬಿದ್ದು…
ಅವಸರವೇನು
ನಿಧಾನ
* * *

ಬಹುದಿನಗಳಿಂದಲೂ
ಒಬ್ಬ ಸಿಗರೇಟು ತೆಗೆದರೆ
ಇನ್ನೊಬ್ಬ ಕಡ್ಡಿಗೀರುವನು
ಹಾಗಿತ್ತು

ತುಸು ಸಂಗೀತವೂ ಇತ್ತು
ಅದು ಆಗೀಗ
ನೀರ ಝುರಿಯಂತೆ
ಹರಿದು ಬರುತಿತ್ತು
ಮುಂದೆ ಹೋದಂತೆ
ಹಿಂದೆಯೂ ಬರುತಿತ್ತು
ನದಿ ದಾಟಿದವರಿಗೆ
ಇದು ಗೊತ್ತು
ನದೀ ಮಧ್ಯದಲೇ
ತಲೆ ಸುತ್ತು
ಆಗ
* * *

ಆಗಲೇ ಆರು ಹೊಡೆಯಿತು
ಕೊನೇ ಉಗಿಬಂಡಿಯೂ
ವರ್ಧಿಸಿತು ವೇಗ
ಆಗಲೇ
ಅಸ್ಪಷ್ಟ ಬೆಳಕಿನಲಿ
ನೀ ಎದ್ದು ನಿಂತಿ
ಎರಡೂ ಕೈಯಲಿ ಕಲ್ಲ
ಎತ್ತಿ ಹೊಡೆದಿ
ಆಮೇಲೆ ಕಿಟಕಿಯ
ಹೊರಕ್ಕೆ ದೂಡಿದಿ
ಧಡ್ಡೆಂದು ಸದ್ದು
ಒಮ್ಮೆ ಕೇಳಿಸಿತು
ಉಗಿ ಬಂಡಿಯ ಸದ್ದು
ಅದನ್ನು ಅಳಿಸಿತ್ತು
* * *

ಅವ ಬಾಗಿಲ ಬಳಿ
ಹೋಗುವನು
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಬಾಗಿಲ
ತೆರೆಯುವನು

ಅವನೇ ! ಅವ
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಕಾಲ
ಮನೆಯೊಳಗೆ ಇರಿಸುವನು
* * *

“ಸಂಜೆಯ ಕಿಟಕಿ ?”
“ಹೌದು”
“ಸರಿಯಾದ ಕಡೆಗೆ”
“ನನ್ನದೆ ಯೋಚನೆ”
“ಆ ಕಲ್ಲು ?”
“ಅದೂ ನನ್ನದೆ”
“ಚೆನ್ನಾಗಿದೆ. ಕಬ್ಬಿಣ ಅಥವ…”
“ಯುರೇನಿಯದಂತೆ ?”
“ಬಹಳ ಭಾರವಿರಬೇಕು”
“ಇದೆ”
* * *

ಅವಸರದ ಮಾತಲ್ಲ
ಅದರ ಅಗತ್ಯವೂ ಇಲ್ಲ
ಒಂದೆರಡು ದಿನಗಳೆ ?
ಆರಾಮ ಕುರ್ಚಿಯಲಿ
ನೀನು ಕುಳಿತಿರುವಿ
ಬಾಗಿಲಿನ ಬಡಿತಕ್ಕೆ
ಎದ್ದು ಬರುವಿ
ಒಂದು ಕ್ಷಣ ಯೋಚನೆಗೆ
ಸಿಕ್ಕಿದಂತಿರುವಿ
ಆಮೇಲೆ ನಿಧಾನ
ತೆರೆದೇ ತೆರೆಯುವಿ
ಒದ್ದೆಯಾಗಿಲ್ಲ ಮೈ
ಒದ್ದೆಯಾಗಿಲ್ಲ ಕೂದಲೂ
ಆದರೂ
ಹಳೇ ಹಾವಸೆಯ ವಾಸನೆ
ಮತ್ತೊಮ್ಮೆ ನಾನು
ಒಳಕ್ಕೆ ಕಾಲಿಡುವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ೫೦ ವರ್ಷ ಬಳೆಸಬಹುದಾದ ಬ್ಯಾಟರಿ
Next post ಬಾರಯ್ಯಾ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…