Home / ಕವನ / ಕವಿತೆ / ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು :
“ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ
ತಲೆಯೆಂದರೆ ನಿನ್ನದೆ ! ಆದ್ದರಿಂದ
ಆತ್ಮವಿದ್ಯೆ ನಿನಗೇ
ಕಲಿಸುವೆ ನಾನು ಪ್ರತ್ಯಕ್ಷ.”

ನಗಾರಿಯೊಂದ ತರಿಸಿದ.
ಅದಕ್ಕೆ ಸರೀ ಬಾರಿಸಿದ.
ಅದರ ಸದ್ದು ಸುತ್ತಲೂ
ಗಿರಿಕಂದರ ವ್ಯಾಪಿಸಿತು.
ಹಕ್ಕಿಗಳೂ ಹಾರಿದುವು
ಕೋತಿಗಳೂ ಓಡಿದವು.
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:
“ಎಲ್ಲಿಂದ ಹೊರಟಿತು, ಎಲ್ಲಿಗೆ ಹೋಯ್ತು ?
ಹಿಡಿವಂತಿಲ್ಲ ಕೈಯಲ್ಲಿ
ಕರೆವಂತಿಲ್ಲ ವಾಪಸು
ಆದರೂ-
ನಗಾರಿ ನಮ್ಮ ಕೈಯೊಳಗೆ !”
**

ಬೆಂಕಿಯೊಂದ ಮಾಡಿದ-ಅದಕ್ಕೆ
ಹಸೀ ಉರುವಲು ಹಾಕಿದ.
ಹೊಗೆ!

ಕಪ್ಪು, ಕಂದು, ನೀಲಿ
ಎಲ್ಲಾ ಕಡೆ ಹೊರಳಿ
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:

“ಹೇಗೆ ಹಸೀ ಸೌದೆಯಿಂದ
ಹುಟ್ಟುತ್ತದೆ ಹೊಗೆ-ಹಾಗೆ
ಆತ್ಮದಿಂದ ಎಲ್ಲವೂ !”
**

ದೋಣಿಯೊಂದ ತರಿಸಿದ-ತಳಕ್ಕೆ
ಎರಡು ತೂತು ಕೊರೆಸಿದ.
ನೀರು ಒಳಕ್ಕೆ ಧಾವಿಸಿತು
ಮೊಗೆದಷ್ಟೂ ಮುಗಿಯದೆ.
ಈಜಿ ದಡ ಸೇರಿದರು.
“ನೋಡಿದಿಯಾ !” ಎಂದ ಯಾಜ್ಞವಲ್ಕ್ಯ
“ದೇಹವೆಂದವರೆ ಒಡಕು ದೋಣಿ
ನಂಬಿದವಗೆ ಗತಿಯಿಲ್ಲ–
ಆತ್ಮಜ್ಞಾನವೆಂದರೆ
ಅದು ಈಜಿನ ಹಾಗೆ !”
**

ಆರಗಿಣಿಯೊಂದ ತರಿಸಿದ
ಪಂಚವರ್ಣದ ಗಿಣಿ, ಸಣ್ಣ ಕಣ್ಣಿನ ಗಿಣಿ
ನೋಡಿದರೆ ಇನ್ನೂ
ನೋಡವೇಕೆಂಬ ಗಿಣಿ
ಹಾಡುವುದಕ್ಕೆ ಕಲಿಯಿತು
ವೇದಗಳ ಪಠಿಸಿತು
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಹಾಡುತ್ತದೆ, ನುಡಿಯುತ್ತದೆ
ಮಾತ್ರ-
ಯಾಕೆ ಏನು ತಿಳಿಯದು.
ಆತ್ಮಜ್ಞಾನ ಇರದ ಹೊರತು
ಏನು ಹೇಳಿ ಏನು !”
**

ಹೇಂಟೆಯೊಂದ ತರಿಸಿದ
ಪ್ರತಿದಿನವೂ ತಿನಿಸಿದ.
ಬೆಳಗಿಂಜಾಮ ಕೂಗುತಿತ್ತು
ಎಲ್ಲರ ಎಬ್ಬಿಸುತಿತ್ತು
ಮಾತ್ರ-ಎಷ್ಟೇ ದಿನ ಕಳೆದರೂ
ಇಡಲಿಲ್ಲ ತತ್ತಿ
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಆತ್ಮಕ್ಕೆ ಬೇಕು ಪರಮಾತ್ಮ
ಇಲ್ಲದೇ-
ದಕ್ಕಲಾರದು ಬ್ರಹ್ಮಾಂಡ !
**

ಮುಗಿಯಿತೇ ಎಂದಳು ಮೈತ್ರೇಯಿ
ಹೂಂ ಎಂದ ಯಾಜ್ಞವಲ್ಕ್ಯ.
ಒಂದು ಮಾತ್ರ ಮರೆತಿರೆಂದು
ಸೀರೆ ರವಿಕೆ ಬಿಚ್ಚಿದಳು
ಲಂಗ ಒದ್ದು ಜಾಡಿಸಿದಳು.
“ನೋಡಿದಿರಾ!” ಎಂದಳು ಮೈತ್ರೇಯಿ :
“ಸೀರೆಯೆಂದರಹಂಕಾರ
ರವಿಕೆ ತಪ್ಪು ಗ್ರಹಿಕೆ
ಬಾಡಿಯೆಂದರೆ ಕಿಲಾಡಿ
ಲಂಗ ಆಶಾಭಂಗ-ಇನ್ನು
ನೂರಕ್ಕೆ ನೂರು ಸಾಚಾ
ಆಗಬೇಕೆಂದರೆ ಇದೋ !” ಎಂದು
ಕಿತ್ಕೆಸೆದಳು ಕಾಚ !
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...