Home / ಕವನ / ಕವಿತೆ / ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು :
“ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ
ತಲೆಯೆಂದರೆ ನಿನ್ನದೆ ! ಆದ್ದರಿಂದ
ಆತ್ಮವಿದ್ಯೆ ನಿನಗೇ
ಕಲಿಸುವೆ ನಾನು ಪ್ರತ್ಯಕ್ಷ.”

ನಗಾರಿಯೊಂದ ತರಿಸಿದ.
ಅದಕ್ಕೆ ಸರೀ ಬಾರಿಸಿದ.
ಅದರ ಸದ್ದು ಸುತ್ತಲೂ
ಗಿರಿಕಂದರ ವ್ಯಾಪಿಸಿತು.
ಹಕ್ಕಿಗಳೂ ಹಾರಿದುವು
ಕೋತಿಗಳೂ ಓಡಿದವು.
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:
“ಎಲ್ಲಿಂದ ಹೊರಟಿತು, ಎಲ್ಲಿಗೆ ಹೋಯ್ತು ?
ಹಿಡಿವಂತಿಲ್ಲ ಕೈಯಲ್ಲಿ
ಕರೆವಂತಿಲ್ಲ ವಾಪಸು
ಆದರೂ-
ನಗಾರಿ ನಮ್ಮ ಕೈಯೊಳಗೆ !”
**

ಬೆಂಕಿಯೊಂದ ಮಾಡಿದ-ಅದಕ್ಕೆ
ಹಸೀ ಉರುವಲು ಹಾಕಿದ.
ಹೊಗೆ!

ಕಪ್ಪು, ಕಂದು, ನೀಲಿ
ಎಲ್ಲಾ ಕಡೆ ಹೊರಳಿ
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:

“ಹೇಗೆ ಹಸೀ ಸೌದೆಯಿಂದ
ಹುಟ್ಟುತ್ತದೆ ಹೊಗೆ-ಹಾಗೆ
ಆತ್ಮದಿಂದ ಎಲ್ಲವೂ !”
**

ದೋಣಿಯೊಂದ ತರಿಸಿದ-ತಳಕ್ಕೆ
ಎರಡು ತೂತು ಕೊರೆಸಿದ.
ನೀರು ಒಳಕ್ಕೆ ಧಾವಿಸಿತು
ಮೊಗೆದಷ್ಟೂ ಮುಗಿಯದೆ.
ಈಜಿ ದಡ ಸೇರಿದರು.
“ನೋಡಿದಿಯಾ !” ಎಂದ ಯಾಜ್ಞವಲ್ಕ್ಯ
“ದೇಹವೆಂದವರೆ ಒಡಕು ದೋಣಿ
ನಂಬಿದವಗೆ ಗತಿಯಿಲ್ಲ–
ಆತ್ಮಜ್ಞಾನವೆಂದರೆ
ಅದು ಈಜಿನ ಹಾಗೆ !”
**

ಆರಗಿಣಿಯೊಂದ ತರಿಸಿದ
ಪಂಚವರ್ಣದ ಗಿಣಿ, ಸಣ್ಣ ಕಣ್ಣಿನ ಗಿಣಿ
ನೋಡಿದರೆ ಇನ್ನೂ
ನೋಡವೇಕೆಂಬ ಗಿಣಿ
ಹಾಡುವುದಕ್ಕೆ ಕಲಿಯಿತು
ವೇದಗಳ ಪಠಿಸಿತು
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಹಾಡುತ್ತದೆ, ನುಡಿಯುತ್ತದೆ
ಮಾತ್ರ-
ಯಾಕೆ ಏನು ತಿಳಿಯದು.
ಆತ್ಮಜ್ಞಾನ ಇರದ ಹೊರತು
ಏನು ಹೇಳಿ ಏನು !”
**

ಹೇಂಟೆಯೊಂದ ತರಿಸಿದ
ಪ್ರತಿದಿನವೂ ತಿನಿಸಿದ.
ಬೆಳಗಿಂಜಾಮ ಕೂಗುತಿತ್ತು
ಎಲ್ಲರ ಎಬ್ಬಿಸುತಿತ್ತು
ಮಾತ್ರ-ಎಷ್ಟೇ ದಿನ ಕಳೆದರೂ
ಇಡಲಿಲ್ಲ ತತ್ತಿ
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಆತ್ಮಕ್ಕೆ ಬೇಕು ಪರಮಾತ್ಮ
ಇಲ್ಲದೇ-
ದಕ್ಕಲಾರದು ಬ್ರಹ್ಮಾಂಡ !
**

ಮುಗಿಯಿತೇ ಎಂದಳು ಮೈತ್ರೇಯಿ
ಹೂಂ ಎಂದ ಯಾಜ್ಞವಲ್ಕ್ಯ.
ಒಂದು ಮಾತ್ರ ಮರೆತಿರೆಂದು
ಸೀರೆ ರವಿಕೆ ಬಿಚ್ಚಿದಳು
ಲಂಗ ಒದ್ದು ಜಾಡಿಸಿದಳು.
“ನೋಡಿದಿರಾ!” ಎಂದಳು ಮೈತ್ರೇಯಿ :
“ಸೀರೆಯೆಂದರಹಂಕಾರ
ರವಿಕೆ ತಪ್ಪು ಗ್ರಹಿಕೆ
ಬಾಡಿಯೆಂದರೆ ಕಿಲಾಡಿ
ಲಂಗ ಆಶಾಭಂಗ-ಇನ್ನು
ನೂರಕ್ಕೆ ನೂರು ಸಾಚಾ
ಆಗಬೇಕೆಂದರೆ ಇದೋ !” ಎಂದು
ಕಿತ್ಕೆಸೆದಳು ಕಾಚ !
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...