ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು :
“ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ
ತಲೆಯೆಂದರೆ ನಿನ್ನದೆ ! ಆದ್ದರಿಂದ
ಆತ್ಮವಿದ್ಯೆ ನಿನಗೇ
ಕಲಿಸುವೆ ನಾನು ಪ್ರತ್ಯಕ್ಷ.”

ನಗಾರಿಯೊಂದ ತರಿಸಿದ.
ಅದಕ್ಕೆ ಸರೀ ಬಾರಿಸಿದ.
ಅದರ ಸದ್ದು ಸುತ್ತಲೂ
ಗಿರಿಕಂದರ ವ್ಯಾಪಿಸಿತು.
ಹಕ್ಕಿಗಳೂ ಹಾರಿದುವು
ಕೋತಿಗಳೂ ಓಡಿದವು.
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:
“ಎಲ್ಲಿಂದ ಹೊರಟಿತು, ಎಲ್ಲಿಗೆ ಹೋಯ್ತು ?
ಹಿಡಿವಂತಿಲ್ಲ ಕೈಯಲ್ಲಿ
ಕರೆವಂತಿಲ್ಲ ವಾಪಸು
ಆದರೂ-
ನಗಾರಿ ನಮ್ಮ ಕೈಯೊಳಗೆ !”
**

ಬೆಂಕಿಯೊಂದ ಮಾಡಿದ-ಅದಕ್ಕೆ
ಹಸೀ ಉರುವಲು ಹಾಕಿದ.
ಹೊಗೆ!

ಕಪ್ಪು, ಕಂದು, ನೀಲಿ
ಎಲ್ಲಾ ಕಡೆ ಹೊರಳಿ
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:

“ಹೇಗೆ ಹಸೀ ಸೌದೆಯಿಂದ
ಹುಟ್ಟುತ್ತದೆ ಹೊಗೆ-ಹಾಗೆ
ಆತ್ಮದಿಂದ ಎಲ್ಲವೂ !”
**

ದೋಣಿಯೊಂದ ತರಿಸಿದ-ತಳಕ್ಕೆ
ಎರಡು ತೂತು ಕೊರೆಸಿದ.
ನೀರು ಒಳಕ್ಕೆ ಧಾವಿಸಿತು
ಮೊಗೆದಷ್ಟೂ ಮುಗಿಯದೆ.
ಈಜಿ ದಡ ಸೇರಿದರು.
“ನೋಡಿದಿಯಾ !” ಎಂದ ಯಾಜ್ಞವಲ್ಕ್ಯ
“ದೇಹವೆಂದವರೆ ಒಡಕು ದೋಣಿ
ನಂಬಿದವಗೆ ಗತಿಯಿಲ್ಲ–
ಆತ್ಮಜ್ಞಾನವೆಂದರೆ
ಅದು ಈಜಿನ ಹಾಗೆ !”
**

ಆರಗಿಣಿಯೊಂದ ತರಿಸಿದ
ಪಂಚವರ್ಣದ ಗಿಣಿ, ಸಣ್ಣ ಕಣ್ಣಿನ ಗಿಣಿ
ನೋಡಿದರೆ ಇನ್ನೂ
ನೋಡವೇಕೆಂಬ ಗಿಣಿ
ಹಾಡುವುದಕ್ಕೆ ಕಲಿಯಿತು
ವೇದಗಳ ಪಠಿಸಿತು
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಹಾಡುತ್ತದೆ, ನುಡಿಯುತ್ತದೆ
ಮಾತ್ರ-
ಯಾಕೆ ಏನು ತಿಳಿಯದು.
ಆತ್ಮಜ್ಞಾನ ಇರದ ಹೊರತು
ಏನು ಹೇಳಿ ಏನು !”
**

ಹೇಂಟೆಯೊಂದ ತರಿಸಿದ
ಪ್ರತಿದಿನವೂ ತಿನಿಸಿದ.
ಬೆಳಗಿಂಜಾಮ ಕೂಗುತಿತ್ತು
ಎಲ್ಲರ ಎಬ್ಬಿಸುತಿತ್ತು
ಮಾತ್ರ-ಎಷ್ಟೇ ದಿನ ಕಳೆದರೂ
ಇಡಲಿಲ್ಲ ತತ್ತಿ
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಆತ್ಮಕ್ಕೆ ಬೇಕು ಪರಮಾತ್ಮ
ಇಲ್ಲದೇ-
ದಕ್ಕಲಾರದು ಬ್ರಹ್ಮಾಂಡ !
**

ಮುಗಿಯಿತೇ ಎಂದಳು ಮೈತ್ರೇಯಿ
ಹೂಂ ಎಂದ ಯಾಜ್ಞವಲ್ಕ್ಯ.
ಒಂದು ಮಾತ್ರ ಮರೆತಿರೆಂದು
ಸೀರೆ ರವಿಕೆ ಬಿಚ್ಚಿದಳು
ಲಂಗ ಒದ್ದು ಜಾಡಿಸಿದಳು.
“ನೋಡಿದಿರಾ!” ಎಂದಳು ಮೈತ್ರೇಯಿ :
“ಸೀರೆಯೆಂದರಹಂಕಾರ
ರವಿಕೆ ತಪ್ಪು ಗ್ರಹಿಕೆ
ಬಾಡಿಯೆಂದರೆ ಕಿಲಾಡಿ
ಲಂಗ ಆಶಾಭಂಗ-ಇನ್ನು
ನೂರಕ್ಕೆ ನೂರು ಸಾಚಾ
ಆಗಬೇಕೆಂದರೆ ಇದೋ !” ಎಂದು
ಕಿತ್ಕೆಸೆದಳು ಕಾಚ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರಹ
Next post ಎಲ್ಲಿ ಹುಡುಕಲಿ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys