ಸಸ್ಯ ಕಾಸಿಯ ಮ್ಯೂಸಿಯಂ

ಓರ್ವ ವ್ಯಕ್ತಿಗೆ ಒಂದು ಸಸ್ಯ ಕಾಶಿಯ ಮ್ಯೂಸಿಯಂ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆ ಉಂಟಾಯಿತು. ಜಗತ್ತಿನ ಎಲ್ಲಾ ಮರಗಳನ್ನು ಕಡೆದು ಮ್ಯೂಸಿಯಂನಲ್ಲಿ ಇಟ್ಟ. ಜನರು ನೂರು ಡಾಲರ್ ಕೊಟ್ಟು ಟಿಕೆಟ್ ಕೊಂಡು ನೋಡಲು ಬಂದರು. ಮರದ ಹಸಿರು ಸ್ವರ್ಗವನ್ನು ಕಡೆದ ಎಲ್ಲಾ ಮರಗಳಲ್ಲಿ ಕಣ್ಣೀರಿನ ರಕ್ತ ಸೋರುತಿತ್ತು. ಅದು ನೋಡಿಯೂ ಮನುಷ್ಯನ ಮನ ಕರಗಲಿಲ್ಲ. ಬದಲಾಗಿ “ಎಂತಹ ಸ್ವರ್ಗವನ್ನು ನಿರ್ಮಿಸಿದ್ದಾರೆ ಈ ಮ್ಯೂಸಿಯಮ್ ನಲ್ಲಿ” ಎಂದುಕೊಂಡು ಹೊರಗೆ ಬಂದಾಗ ಅವರಿಗೆ ಕಂಡದ್ದು ಹಸಿರಿಲ್ಲದ ಬರಡಾದ ಮರುಭೂಮಿಯ ನರಕ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಸ್ಮಾಸುರ
Next post ಯುಗಾದಿ ಬರುತಿದೆ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…