ಸ್ವಾರ್ಥ

ಭೋರ್ ಎಂದು ಮಳೆ ಸುರಿಯುತ್ತಿತ್ತು. ಎಲೆ ಎಲೆಯು ಮಳೆಹನಿಯ ಉದಿರಿಸಿ ಮಳೆಹನಿಯೊಂದಿಗೆ ತಾಳ ಹಾಕುತ್ತಿತ್ತು. ವೃಕ್ಷದ ಕೆಳಗೆ ಇದ್ದ ಬುದ್ಧನ ವಿಗ್ರಹ ಮರದ ಬುಡದಲ್ಲಿ ನೆನೆಯದೇ ಧ್ಯಾನಾವಸ್ಥೆಯಲ್ಲಿ ಸ್ಥಿತಪ್ರಜ್ಞವಾಗಿತ್ತು. ಮಳೆಯ ಬಡಿತ ತಾಳಲಾರದೆ ಆಶ್ರಯ ಹುಡುಕಿ ಬಂದ ಒಂದು ಜೀರುಂಡೆ ವಿಗ್ರಹದ ಕೊಂಕುಳಲ್ಲಿ ಆಶ್ರಯ ಪಡೆಯಿತು. ಆಶ್ರಯವಿತ್ತ ಬುದ್ಧನಿಗೆ ಭಕ್ತಿಯಿಂದ ಜೀ ಎಂದು ಶೃತಿಯಲ್ಲಿ ಹಾಡಿ ಕೃತಜ್ಞತೆ ಸಲ್ಲಿಸಿತ್ತು. ಒದ್ದೆ ರೆಕ್ಕೆ ಒದರುತ್ತಾ ಬಂದ ಹಕ್ಕಿ ಬುದ್ಧನ ಒಂದು ಭುಜದ ಮೇಲೆ ಆಸೀನವಾಗಿ ಚಿಲಿಪಿಲಿಗುಟ್ಟಿ ಧನ್ಯತೆಯ ತೋರಿತು. ಮಳೆಯಲ್ಲಿ ತೊಯ್ದು ಬಂದ ಮನುಷ್ಯ ನೋರ್ವ ಹಕ್ಕಿಯನ್ನು ಓಡಿಸಿ, ಜೀರುಂಡೆಯನ್ನು ಒದರಿ ಬುದ್ಧನ ಬೆನ್ನಿಗೆ ಆತು ನಿಂತ. ಸ್ವಾರ್ಥಿ ಮಾನವನನ್ನು ನೋಡಿ ಧ್ಯಾನಸ್ಥಿತ ಬುದ್ಧ ಮುಗುಳು ನಗುತ್ತಲೇ ಇದ್ದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿದ್ಧತೆ
Next post ಕಟ್ಟುವೆವು ನಾವು

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys