ಅರುಣೋದಯ. ಚುಮು ಚುಮು ಬಿಸಿಲು ಬರುವ ಹೊತ್ತು. ಮನೆಯ ಅಂಗಳವನ್ನು ಗುಡಿಸಿ, ನೀರು ಚೆಲ್ಲಿ, ಚುಕ್ಕೆ ಎಣಿಸಿ ಇಟ್ಟು ರಂಗೋಲಿ ಎಳೆಯ ಧಾರೆಯನ್ನು ಬೆರಳುಗಳಿಂದ ಬಿಡುತ್ತಾ, ವೃದ್ದೆ ಬಾಯಲ್ಲಿ ದೇವರನಾಮ ಹೇಳುತ್ತಾಬಾಳನ್ನು ಪೂಜಿಸಿ ಸಾಧನೆಯಲ್ಲಿ ತೊಡಗಿದ್ದಳು. ಜಗಲಿಯಲ್ಲಿ ಕುಳಿತಿದ್ದ ಅವಳ ವೃದ್ಧ ಪತಿ ಎಲೆ ಅಡಿಕೆ ತಂಬಾಕು ಚಟಕ್ಕೆ ಬಿದ್ದು ಬೊಚ್ಚು ಬಾಯಲ್ಲಿ ಜಿಗಿದು, ಪಿಚ್ ಪಿಚ್ ಎಂದು ಉಗುಳುತ್ತ ವೃತ್ತ ಪತ್ರಿಕೆಯ ಓದಿ ಬಾಳನ್ನು ಹೀಯಾಳಿಸಿ ಬೈಯುತ್ತಿದ್ದ. ಪೂಜೆ, ಬೈಗುಳು ನಡುವೆ ಬಾಳು ಜೋಕಾಲಿಯಾಡುತಿತ್ತು.
*****
Related Post
ಸಣ್ಣ ಕತೆ
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…