ಅವಳು ಮುಂಜಾನೆ ಎದ್ದು ಜಳಕ ಮಾಡಿ ಕನ್ನಡಿ ಮುಂದೆ ನಿಂತಳು. ಕಣ್ಣಲ್ಲಿ ಕಾಂತಿ, ಮುಖದಲ್ಲಿ ಹೊಳಪು, ಮನದಲ್ಲಿ ಶಾಂತಿ ಮೂರೂ ಅವಳಿಗೆ ಕನ್ನಡಿಯಲ್ಲಿ ಕಂಡಿತು. ನಾನು ಎಷ್ಟು ಆರೋಗ್ಯವಂತೆ ಎಂದುಕೊಂಡಳು. ವೃತ್ತ ಪತ್ರಿಕೆ ಓದಲು ಆರಾಮವಾಗಿ ಕುಳಿತಳು. ಅದರಲ್ಲಿ ಕೊಲೆ, ಕಪಟ, ಕಳ್ಳತನ, ದುರ್ಘಟನೆಗಳು, ದುಷ್ಕರ್ಮಗಳು, ದ್ವೇಷ, ಯುದ್ಧ ಭೀತಿ, ಪ್ರಕೃತಿ ವಿಕೋಪ, ಪ್ರವಾಹ, ಪೀಡೆ, ಕೋಮುವಾರು ಗಲಭೆ, ಹೀಗೆ ಜಗತ್ತಿನ ಮೂಲೆ ಮೂಲೆಯಲ್ಲಿ ಸಾವಿರಾರು ಸಾಯುವ ಜನರಬಗ್ಗೆ ಓದಿ ಅವಳು ಅನ್ಯಮನಸ್ಕಳಾದಳು. ಬುದ್ದಿ ಮಂಕಾಯಿತು. ಶಕ್ತಿ ಕುಂದಿದ ಹಾಗೆ ಆಯಿತು. ದೂರದರ್ಶನ, ರೇಡಿಯೋ ಮನರಂಜನೆಗೆಂದು ಹಾಕಿದಳು. ಮತ್ತೆ ಅದೇ ಮನಕಲಕುವ ಸುದ್ದಿಗಳು. ಸಂಜೆ ಮತ್ತೆ ಅವಳು ದರ್ಪಣದಲ್ಲಿ ತನ್ನ ಮುಖವನ್ನು ನೋಡಿಕೊಂಡಳು. ಇದೇನು ಮುಂಜಾನೆಯ ಆರೋಗ್ಯ ಈಗ ಏಕೆ ಇಷ್ಟು ಹದಗೆಟ್ಟಿತು? ಎಂದು ಯೋಚಿಸಿ ಜೋಲು ಮುಖಹಾಕಿ ಕೊಂಡಳು. ಕೈ ಜೋಡಿಸಿ “ಲೋಕಾ ಸಮಸ್ತಾ ಸುಖಿನೋ ಭವಂತು” ಎಂದು ಪ್ರಾರ್ಥಿಸಿದಳು.
*****
Related Post
ಸಣ್ಣ ಕತೆ
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…