Home / ಕಥೆ / ಹನಿ ಕಥೆ / ಆರೋಗ್ಯ ಕೆಟ್ಟಿದ್ದು ಹೇಗೆ?

ಆರೋಗ್ಯ ಕೆಟ್ಟಿದ್ದು ಹೇಗೆ?

ಅವಳು ಮುಂಜಾನೆ ಎದ್ದು ಜಳಕ ಮಾಡಿ ಕನ್ನಡಿ ಮುಂದೆ ನಿಂತಳು. ಕಣ್ಣಲ್ಲಿ ಕಾಂತಿ, ಮುಖದಲ್ಲಿ ಹೊಳಪು, ಮನದಲ್ಲಿ ಶಾಂತಿ ಮೂರೂ ಅವಳಿಗೆ ಕನ್ನಡಿಯಲ್ಲಿ ಕಂಡಿತು. ನಾನು ಎಷ್ಟು ಆರೋಗ್ಯವಂತೆ ಎಂದುಕೊಂಡಳು. ವೃತ್ತ ಪತ್ರಿಕೆ ಓದಲು ಆರಾಮವಾಗಿ ಕುಳಿತಳು. ಅದರಲ್ಲಿ ಕೊಲೆ, ಕಪಟ, ಕಳ್ಳತನ, ದುರ್ಘಟನೆಗಳು, ದುಷ್ಕರ್ಮಗಳು, ದ್ವೇಷ, ಯುದ್ಧ ಭೀತಿ, ಪ್ರಕೃತಿ ವಿಕೋಪ, ಪ್ರವಾಹ, ಪೀಡೆ, ಕೋಮುವಾರು ಗಲಭೆ, ಹೀಗೆ ಜಗತ್ತಿನ ಮೂಲೆ ಮೂಲೆಯಲ್ಲಿ ಸಾವಿರಾರು ಸಾಯುವ ಜನರಬಗ್ಗೆ ಓದಿ ಅವಳು ಅನ್ಯಮನಸ್ಕಳಾದಳು. ಬುದ್ದಿ ಮಂಕಾಯಿತು. ಶಕ್ತಿ ಕುಂದಿದ ಹಾಗೆ ಆಯಿತು. ದೂರದರ್ಶನ, ರೇಡಿಯೋ ಮನರಂಜನೆಗೆಂದು ಹಾಕಿದಳು. ಮತ್ತೆ ಅದೇ ಮನಕಲಕುವ ಸುದ್ದಿಗಳು. ಸಂಜೆ ಮತ್ತೆ ಅವಳು ದರ್ಪಣದಲ್ಲಿ ತನ್ನ ಮುಖವನ್ನು ನೋಡಿಕೊಂಡಳು. ಇದೇನು ಮುಂಜಾನೆಯ ಆರೋಗ್ಯ ಈಗ ಏಕೆ ಇಷ್ಟು ಹದಗೆಟ್ಟಿತು? ಎಂದು ಯೋಚಿಸಿ ಜೋಲು ಮುಖಹಾಕಿ ಕೊಂಡಳು. ಕೈ ಜೋಡಿಸಿ “ಲೋಕಾ ಸಮಸ್ತಾ ಸುಖಿನೋ ಭವಂತು” ಎಂದು ಪ್ರಾರ್ಥಿಸಿದಳು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...