ಅವರು ತೋಟದಲ್ಲಿ ಹೆಮ್ಮರಗಳ ಸಾಲಿನಲ್ಲಿದ್ದ ಒಂದು ಪುಟ್ಟ ಗುಡಿಸಿಲಿನಲ್ಲಿ ಸಂಸಾರ ಹೂಡಿದ್ದರು. ವರ್ಷಗಳು ಉರುಳಿ, ಸಂಸಾರ ದೊಡ್ಡದಾಯಿತು. ವ್ಯಾಪಾರ ಆದಾಯ ಹೆಚ್ಚಿತು. ತೋಟದ ಎಲ್ಲಾ ಹೆಮ್ಮರಗಳನ್ನು ನೆಲಸಮ ಮಾಡಿ ದೊಡ್ಡ ಬಂಗಲೆ ಕಟ್ಟಿಸಿಕೊಂಡ. “ನೀನು ಮನೆಯಲ್ಲಿರುವೆಯಾ? ಇಲ್ಲಾ ನಮ್ಮನ್ನು ಕಡೆದು ಕಟ್ಟಿದ ಗೋರಿಯಲ್ಲಿ ಇರುವೆಯಾ?” ಎಂದು ಹೆಮ್ಮರಗಳ ಆತ್ಮ ಚೀರಿ ಕೇಳಿತು. ಅವನ ಮೈ ಎಲ್ಲ ಬೆವತು ಎದ್ದು ಕೂಡುತಿದ್ದ, ಇಡಿ ರಾತ್ರಿ ನಿದ್ರೆ ಬಾರದೆ, ಹೆಮ್ಮರಗಳ ಸಾವು ಏಕೆ ಉಸಿರುಗಟ್ಟಿಸುತ್ತಿದೆ? ಎಂದು ಚಿಂತಿಸಿದ.
*****
Related Post
ಸಣ್ಣ ಕತೆ
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಮಿಂಚಿನ ದೀಪ
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…