ಕನಸು

ಓರ್ವ ವಿರಹಿ ಪ್ರೇಮಿಗೆ ದಿನವೂ ಒಂದು ಕನಸು ಬೀಳುತ್ತಿತ್ತು. ಅವನು ತನ್ನ ಪ್ರೀತಿ ಪುತ್ಥಳಿಯನ್ನು ಹಿಂಬಾಲಿಸಿ ನಡೆಯುತ್ತಲೇ ಇದ್ದ. ಮೈಲಿ ಮೈಲಿಗೂ ಅವಳು ನಿಂತಂತೆ ಅನಿಸಿ ಮತ್ತೆ ಮುಂದೆ ಸಾಗುತ್ತಿದ್ದಳು. ಅದೇ ವೇಗದಲ್ಲಿ ಅವನೂ ಸಾಗುತ್ತಿದ್ದ. ಕನಸಿನ ಹಾದಿಯಲ್ಲಿ ಪ್ರೀತಿಯ ಸೆರಗು ಹಾರಿ ಹಾರಿ ನಡಿಗೆ ಮುಂದುವರಿಸಲು ಕರೆ ನೀಡುತ್ತಿತ್ತು. ಎಚ್ಚೆತ್ತು ದಿನದ ಬೆಳಗಲ್ಲಿ ಅದೇ ಹಾದಿಯಲ್ಲಿ ಪ್ರೀತಿ ಹುಡುಕಿ ಸಾಗಿದ. ಅವನಿಗೆ ಕಂಡದ್ದು ಮೈಲಿ ಮೈಲಿಗೂ ದಿಟ್ಟ ನಿಲುವಲ್ಲಿ ನಿಂತ ಮೈಲಿ ಗಲ್ಲುಗಳು. ಅವುಗಳ ನಿಲುವಿನ ಬಿಂಬದಲ್ಲಿ ಅವನು ಕಂಡದ್ದು ತಾಯಿ, ತಂದೆ, ಅಕ್ಕ, ತಂಗಿ, ಅಣ್ಣ, ತಮ್ಮ, ಬಂಧುಬಳಗ ಮತ್ತೂ ತನ್ನ ಪ್ರೇಯಸಿಯನ್ನು. ಇವರೆಲ್ಲರೂ ತನ್ನ ಬಾಳಿನುದ್ದಕ್ಕೂ ನಡೆಸಿದ ಮೈಲಿಗಲ್ಲುಗಳಲ್ಲವೇ? ಎಂಬ ಅರಿವು ಪ್ರೇಯಸಿಯ ವಿರಹಕ್ಕೆ ತಂಪೆರಚಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಂಕಿ
Next post ಹೇಗೋ ನನಗೆ ತಿಳಿದಹಾಗೆ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…