ಎಲೆ ಚೆಲುವ ದುಂದುಗಾರನೆ

ಎಲೆ ಚೆಲುವ ದುಂದುಗಾರನೆ ಏಕೆ ವ್ಯಯಿಸುವೆ
ಪಡೆದ ಸ್ವತ್ತನ್ನೆಲ್ಲ ಬರಿದೆ ನಿನಗಾಗೇ?
ನಿಸ್ಪೃಹಳು, ಪ್ರಕೃತಿ ನೀಡುವುದೆಲ್ಲ ಸಾಲವೇ,
ಅದನು ಸಹ ನೀಡುವಳು ಕೇವಲ ಉದಾರಿಗೆ.
ಎಲೆ ಜಿಪುಣ ಚೆನ್ನಿಗನೆ ದಾನಮಾಡಲು ಇತ್ತ
ಭಾರಿ ಕೊಡುಗೆಯ ಹೀಗೆ ಹಾಳುಮಾಡುವೆ ಏಕೆ?
ಭೂರಿ ಸಂಪತ್ತು ಪಡೆದೂ ವ್ಯರ್ಥ ಶ್ರೀಮಂತ,
ಭಾರಿ ಹಣ ಬಳಸಿಯೂ ಬಾಳಲಾರೆ ಅದೇಕೆ?
ನಿನ್ನೊಡನೆ ನೀನೆ ವ್ಯವಹಾರ ನಡೆಸಲು ಹೀಗೆ
ನಿನಗೆ ನೀನೇ ಮೋಸ ಮಾಡಿಕೊಳ್ಳುವ ಪ್ರಿಯ ಒಲವೆ
ಪ್ರಕೃತಿ ನಿನ್ನನು ರಂಗದಾಚೆ ಕಳಿಸುವ ಗಳಿಗೆ
ಎಲ್ಲರೊಪ್ಪುವ ಯಾವ ಲೆಕ್ಕ ನೀ ಕೊಡುವೆ?
ನೀನು ಬಳಸದ ಚೆಲುವು ನಿನ್ನ ಜೊತೆ ಸಾಯುವುದು,
ಬಳಸಿದೆಯೊ ನಿನ್ನ ಸಂತತಿಯಲ್ಲಿ ಹಾಯುವುದು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 4
Lo in the Orient when the gracious light…

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಸಗರಹಳ್ಳಿ ರಾಮಣ್ಣ : ಸುಗ್ಗಿ-ಸಂಕಟಗಳ ಕತೆಗಾರ
Next post ದಾಖಲೆ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys