Home / ಕವನ / ಅನುವಾದ / ಎಲೆ ಚೆಲುವ ದುಂದುಗಾರನೆ

ಎಲೆ ಚೆಲುವ ದುಂದುಗಾರನೆ

ಎಲೆ ಚೆಲುವ ದುಂದುಗಾರನೆ ಏಕೆ ವ್ಯಯಿಸುವೆ
ಪಡೆದ ಸ್ವತ್ತನ್ನೆಲ್ಲ ಬರಿದೆ ನಿನಗಾಗೇ?
ನಿಸ್ಪೃಹಳು, ಪ್ರಕೃತಿ ನೀಡುವುದೆಲ್ಲ ಸಾಲವೇ,
ಅದನು ಸಹ ನೀಡುವಳು ಕೇವಲ ಉದಾರಿಗೆ.
ಎಲೆ ಜಿಪುಣ ಚೆನ್ನಿಗನೆ ದಾನಮಾಡಲು ಇತ್ತ
ಭಾರಿ ಕೊಡುಗೆಯ ಹೀಗೆ ಹಾಳುಮಾಡುವೆ ಏಕೆ?
ಭೂರಿ ಸಂಪತ್ತು ಪಡೆದೂ ವ್ಯರ್ಥ ಶ್ರೀಮಂತ,
ಭಾರಿ ಹಣ ಬಳಸಿಯೂ ಬಾಳಲಾರೆ ಅದೇಕೆ?
ನಿನ್ನೊಡನೆ ನೀನೆ ವ್ಯವಹಾರ ನಡೆಸಲು ಹೀಗೆ
ನಿನಗೆ ನೀನೇ ಮೋಸ ಮಾಡಿಕೊಳ್ಳುವ ಪ್ರಿಯ ಒಲವೆ
ಪ್ರಕೃತಿ ನಿನ್ನನು ರಂಗದಾಚೆ ಕಳಿಸುವ ಗಳಿಗೆ
ಎಲ್ಲರೊಪ್ಪುವ ಯಾವ ಲೆಕ್ಕ ನೀ ಕೊಡುವೆ?
ನೀನು ಬಳಸದ ಚೆಲುವು ನಿನ್ನ ಜೊತೆ ಸಾಯುವುದು,
ಬಳಸಿದೆಯೊ ನಿನ್ನ ಸಂತತಿಯಲ್ಲಿ ಹಾಯುವುದು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 4
Lo in the Orient when the gracious light…

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...