ಅದೊ ಪೂರ್ವದಿಕ್ಕಿನಲಿ ಘನ ಉದಾತ್ತಜ್ಯೋತಿ
ತನ್ನ ಬೆಳಕಿನ ಶಿರವನೆತ್ತುತಿದೆ, ಕೆಳಗಿಲ್ಲಿ ;
ಇಳೆಯ ದೃಷ್ಟಿಗಳು ಆ ರಾಜಗಾಂಭೀರ್ಯದತಿ
ಹೊಸ ಬಗೆಯ ದರ್ಶನಕೆ ನಮಿಸುತಿವೆ ಬೆರಗಲ್ಲಿ.
ಕಡಿದಾದ ಮೇರುಗಿರಿ ನೆತ್ತಿಯನ್ನೇರಿ ರವಿ
ನಡುವಯಸ್ಸಿನ ಕ್ಷಾತ್ರದಲ್ಲಿ ಝಗಝಗಿಸಿರುವ,
ಮರ್ತ್ಯ ದೃಷ್ಟಿಗಳು ಆ ಸ್ವರ್ಣಯಾತ್ರೆಯ ನೋಡಿ
ಆರಾಧಿಸುತ್ತಿವೆ ಅವನ ಆ ಸಿರಿ ಚೆಲುವ.
ಆದರೂ ತುತ್ತತುದಿಗೇರಿ ಬಳಲಿದ ಭಾನು
ಮುಪ್ಪೇರಿ ರಥಸಹಿತ ಹಗಲಿನಿಂದುರುಳುವನು;
ಹಿಂದೆ ಆರಾಧಿಸಿದ ನೋಟಗಳೆ ಈಗವನು
ಕೆಳನೆಲೆಗೆ ಜಾರಿರಲು ಬೇರೆಡೆಗೆ ಹೊರಳುವುವು.
ನಿನ್ನ ನಡುಹಗಲ ನೀನೂ ಹಾಗೆ ಮೀರದಿರು
ಮಗನಿರದೆ ಮುಗಿವವಗೆ ಲೋಕ ಗೌರವ ಕೊಡದು.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 7
Lo in the Orient when the gracious light
Related Post
ಸಣ್ಣ ಕತೆ
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…