ಅದೊ ಪೂರ್ವದಿಕ್ಕಿನಲಿ ಘನ ಉದಾತ್ತಜ್ಯೋತಿ
ತನ್ನ ಬೆಳಕಿನ ಶಿರವನೆತ್ತುತಿದೆ, ಕೆಳಗಿಲ್ಲಿ ;
ಇಳೆಯ ದೃಷ್ಟಿಗಳು ಆ ರಾಜಗಾಂಭೀರ್ಯದತಿ
ಹೊಸ ಬಗೆಯ ದರ್ಶನಕೆ ನಮಿಸುತಿವೆ ಬೆರಗಲ್ಲಿ.
ಕಡಿದಾದ ಮೇರುಗಿರಿ ನೆತ್ತಿಯನ್ನೇರಿ ರವಿ
ನಡುವಯಸ್ಸಿನ ಕ್ಷಾತ್ರದಲ್ಲಿ ಝಗಝಗಿಸಿರುವ,
ಮರ್ತ್ಯ ದೃಷ್ಟಿಗಳು ಆ ಸ್ವರ್ಣಯಾತ್ರೆಯ ನೋಡಿ
ಆರಾಧಿಸುತ್ತಿವೆ ಅವನ ಆ ಸಿರಿ ಚೆಲುವ.
ಆದರೂ ತುತ್ತತುದಿಗೇರಿ ಬಳಲಿದ ಭಾನು
ಮುಪ್ಪೇರಿ ರಥಸಹಿತ ಹಗಲಿನಿಂದುರುಳುವನು;
ಹಿಂದೆ ಆರಾಧಿಸಿದ ನೋಟಗಳೆ ಈಗವನು
ಕೆಳನೆಲೆಗೆ ಜಾರಿರಲು ಬೇರೆಡೆಗೆ ಹೊರಳುವುವು.
ನಿನ್ನ ನಡುಹಗಲ ನೀನೂ ಹಾಗೆ ಮೀರದಿರು
ಮಗನಿರದೆ ಮುಗಿವವಗೆ ಲೋಕ ಗೌರವ ಕೊಡದು.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 7
Lo in the Orient when the gracious light
Related Post
ಸಣ್ಣ ಕತೆ
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಕನಸು ದಿಟವಾಯಿತು
ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…