ಗಂಟೆ ಸರಿಯುವುದು, ಬೆಳಗಿದ ಹಗಲು ಇಳಿಯುವುದು
ಕರಿಗಪ್ಪು ಇರುಳಲ್ಲಿ, ಮುಪ್ಪು ನೇರಿಳೆ ಹೊಗೆ,
ಕಪ್ಪು ಗುಂಗುರುಳು ನೆರೆ ಬಣ್ಣಕ್ಕೆ ಹೊರಳುವುದು;
ಉರಿಬಿಸಿಲ ಹೀರಿ ಹಿಂದೆಲ್ಲ ಕುರಿಮಂದೆಗೆ
ತಂಪೆರೆದ ಭಾರಿ ಮರಗಳ ಹಸಿರು ಛಾವಣಿ
ಎಲೆಗಳಚಿ ಒಣಗಿ ಬತ್ತಲೆಯಾಗಿ ನಿಲ್ಲುವುದು;
ಋತು ವಸಂತದ ಪಯಿರು ಬಿಗಿದ ಕಂತೆಗಳಾಗಿ
ಬಿಳುಪಾಗಿ, ಸಿದಿಗೆಯನ್ನೇರಿ ನಡೆಯುವುದು.
ಇದನೆಲ್ಲ ಕಂಡು ನಾ ಪ್ರಶ್ನೆಯನ್ನೆತ್ತುವೆನು
ನಿನ್ನ ಚೆಲುವನು ಕುರಿತು. ಎಲ್ಲ ಬಗೆ ಸವಿ, ಚೆಲುವು
ಬೆಳೆದಷ್ಟೆ ವೇಗದಲಿ ಮುಗಿಯುವುದು, ಈ ನೀನೂ
ಸಾಗಲೇಬೇಕು ಕಾಲನ ಕಸದ ಜೊತೆ ಎಲ್ಲವೂ
ಜವನ ಕುಡುಗೋಲೆದುರು ಯಾವ ರಕ್ಷಣೆಯುಂಟು
ನಿನ್ನನೊಯ್ವಾಗ, ನೀ ಪಡೆದ ಸಂತತಿ ಹೊರತು ?
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 12
When do i count the clock that tells the time
Related Post
ಸಣ್ಣ ಕತೆ
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…