ನೀನು ನೀನೇ ಅಲ್ಲ, ಒಳಿತಿತ್ತು ಹಾಗಿರಲು

ನೀನು ನೀನೇ ಅಲ್ಲ, ಒಳಿತಿತ್ತು ಹಾಗಿರಲು.
ಒಲವೆ ನೀನೆಂದಿಗೂ ಹೀಗೇ ಇರುವುದಿಲ್ಲ.
ಸಿದ್ಧತೆಯ ಮಾಡು ಬರಲಿರುವ ಕೊನೆ ಎದುರಿಸಲು
ನಿನ್ನ ಸವಿಬಿಂಬವನು ಯಾರಿಗಾದರು ನೀಡು.
ನಿನ್ನ ಗೇಣಿಯೊಳಿರುವ ಚೆಲುವು ನೀ ನಡೆದಾಗ
ಕೊನೆಗೊಳ್ಳುವುದು ಸಲ್ಲ. ನಿನ್ನ ಪ್ರಿಯ ತಳಿಯೇ
ಮುಂದೆ ಈ ಸೌಂದರ್ಯವನ್ನು ತಳೆವುದು, ಆಗ
ಸತ್ತರೂ ಸಹ ನೀನು ನೀನಾಗಿಯೇ ಉಳಿವೆ.
ಚಳಿಗಾಲದಲಿ ಕ್ರೂರ ಬಿರುಗಾಳಿ ಬಡಿಯುವುದು,
ಸಾವಿನ ಅನಂತ ಹಿಮದಾವೇಶವನು ತಡೆದು
ರಕ್ಷಿಸಲು ಗೌರವ ವಿವಾಹ ಸಾಧನವಿರಲು
ಬೀಳಬಿಡುವರು ಯಾರು ಸುಂದರಗೃಹ ಜರಿದು ?
ದುಂದುಗಾರರು ಮಾತ್ರ. ನಿನಗೆ ಇದ್ದನು ತಂದೆ,
ನಿನ್ನ ಮಗನೂ ಹಾಗೆ ಹೇಳಬೇಡವೆ ಮುಂದೆ ?
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 13
O that you were yourself, but love you are

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಪ್ನ ಮಂಟಪ – ೫
Next post ಪ್ರಿಯಕರ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…