ಈ ನಿರಂಕುಶ ಕ್ರೂರ ಕಾಲನನು ಇದಕಿಂತ

ಈ ನಿರಂಕುಶ ಕ್ರೂರ ಕಾಲನನು ಇದಕಿಂತ
ಧೀರನೆಲೆಯಲಿ ನೀನು ಕಾದದಿರುವುದು ಏಕೆ ?
ನನ್ನ ಈ ಬರಡು ಪದ್ಯಕ್ಕೂ ಮಿಗಿಲಾದಂಥ
ಸಾಧನದ ರಕ್ಷಣೆಯ ಪಡೆಯದಿರುವುದು ಏಕೆ ?
ಜೀವನದ ಸುಖಕ್ಷಣದ ಶಿಖರದಲಿ ನಿಂತಿರುವೆ,
ಮದುವೆಯಾಗದ ಎಷ್ಟೊ ಕನ್ನೆಯುದ್ಯಾನಗಳು
ನಿನ್ನ ಚಿತ್ರಕ್ಕಿಂತ ಘನವಾದ ಜೀವಂತ
ಕುಸುಮಗಳೆ ನಿನಗೆ ತಳೆಯಲು ಕಾಯುತಿರುವುವು.
ನಿನ್ನ ಹೊರ ಚೆಲುವು, ನಿನ್ನಂತರಂಗದ ಕಿರಣ
ನಿನ್ನ ಚಿತ್ರದಲಿ, ಪಳಗದ ನನ್ನ ಪೆನ್ನಲ್ಲಿ
ಬಣ್ಣಿಸಬರದ ಹಾಗೆ ಜೀವದೆಳೆಗಳು ನಿನ್ನ
ಜೀವಂತ ನಿಲಿಸುವುವು ಜನರ ಕಣ್ಣುಗಳಲ್ಲಿ.
ಕೊಡುವ ಕ್ರಿಯೆಯಿಂದಲೇ ನಿನ್ನ ನೀ ಪಡೆಯುವುದು
ನೀ ಬರೆವ ಕುಶಲ ಚಿತ್ತದೊಳೆ ನೀನುಳಿಯುವುದು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 16
But wherefore do not you a mightier way

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಪ್ನ ಮಂಟಪ – ೭
Next post ಗುಂಡು

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…