ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು

ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು
ನಿಜ ಬಣ್ಣಿಸಿದ್ದರೂ, ಅದು ನಿನ್ನ ಘನತೆಯನು
ಅರ್ಧ ಮಾತ್ರವೆ ತೋರುವಂಥ ಸ್ಮಾರಕ ಎಂದು
ಸ್ವರ್ಗಕೇ ಗೊತ್ತಿದ್ದೂ ನಂಬುವರು ಯಾರದನು ?
ಆ ಕಣ್ಣ ಸೊಬಗ ಹಾಗೇ ಚಿತ್ರಿಸಿದರೂ,
ನಿನ್ನ ಘನತೆಯ ಕುರಿತು ಹೊಸ ಹೊಸತು ಬರೆದರೂ,
ಬರಲಿರುವ ಕಾಲ ಸಾರುವುದು – ಈ ನುಡಿ ಸುಳ್ಳು
ಇಂಥ ದೈವಿಕತೆ ಇರಲಿಲ್ಲ ಮನುಜರಲೆಂದೂ.
ದಿನ ಹೋಗಿ ಹಳದಿ ತಿರುಗಿದ ನನ್ನ ಪುಟಗಳನು
ಸಟೆ ನುಡಿವ ಮುದುಕರೆಂಬಂತೆ ಜನ ತೆಗಳುವರು
ನಿನ್ನ ನಿಜ ಸತ್ವವನು ‘ಆವೇಶದಲಿ ಕವಿಯು
ಹಳೆಹಾಡ ಜಗ್ಗಿ ಹಿಗ್ಗಿಸಿದ ಸ್ತುತಿ’ ಎನ್ನುವರು.
ನೀ ಉಳಿವೆ ಆಗ ನಿನ್ನದೆ ಕಂದ ಇದ್ದಲ್ಲಿ
ಎರಡೆರಡು ರೀತಿಯಲಿ, ಕಂದನಲಿ ಕವಿತೆಯಲಿ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 17
Who will believe my verse in time to come

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಪ್ನ ಮಂಟಪ – ೮
Next post ಆಗಾಗ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…