ಮಧುಮಾಸದೊಂದು ಹಗಲಿಗೆ ನಿನ್ನ ಹೋಲಿಸಲೆ ?
ನಿನ್ನ ಸೌಮ್ಯತೆ ಚೆಲುವು ಅದಕಿಂತಲೂ ಹಿರಿದು.
ನಡುಗುವುವು ಸವಿಮೊಗ್ಗುಗಳು ಒಡ್ಡುಗಾಳಿಗೆ,
ಬೇಸಿಗೆಯ ಗೇಣಿ ಬಲು ಬೇಗನೇ ಮುಗಿಯುವುದು;
ಆಗಸದ ಕಣ್ಣು ಕೆಲವೊಮ್ಮೆ ಧಗೆ ಕಾರುವುದು,
ಎಷ್ಟೊ ಸಲ ಅದರ ಹೊಂಬಣ್ಣ ಮಂಕಾಗುವುದು;
ಆಕಸ್ಮಿಕಕ್ಕೊ ಪ್ರಕೃತಿಯ ಒರಟು ಹೊರಳಿಗೋ
ಸಿಕ್ಕು ಒಂದೊಂದೆ ಸೌಂದರ್ಯದೆಳೆ ಕಳಚುವುದು;
ನಿನ್ನ ಅಮೃತವಸಂತ ಕಾಂತಿ ಉಳಿವುದು ನಿತ್ಯ
ಕಾಯ್ದುಕೊಳ್ಳುವುದು ತನ್ನನ್ನು, ಕಾವ್ಯದನಂತ
ರೇಖೆಯಲಿ ಬೆಳೆದಿರಲು ನೀನು, ಸಾವಿಗಸಾಧ್ಯ
ತನ್ನ ನೆರಳಿಗೆ ನಿನ್ನನೆಳೆವೆನೆನ್ನುವ ಪಂಥ.
ಲೋಕ ಬಾಳುವವರೆಗು ಕಣ್ಣು ಕಾಣುವವರೆಗು
ಉಳಿದು ಇದು ನೀಡುವುದು ಅಮರತ್ವವನು ನಿನಗೂ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 18
Shall I compare thee to a summer’s day?
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…