ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ

ದೆಸೆ ತಿರುಗಿ ಮೇಲೆದ್ದ ಜನ ತಮಗೆ ಗಿಟ್ಚಿರುವ
ಬಿರುದು ಬಾವಲಿಯನ್ನು ಕೊಚ್ಚಿಕೊಳ್ಳಲಿ ಬೀಗಿ,
ನನಗಿಲ್ಲ ಅಂಥ ಅದೃಷ್ಟ, ನನ್ನೆಲ್ಲ ಸುಖ
ಬಲು ಹಿರಿಯದೆಂದು ನಾ ಗೌರವಿಸಿದುದರಲ್ಲಿ.
ರಾಜಕೃಪೆ ದಕ್ಕಿ ವೀರರ ಕೀರ್ತಿ ಹಬ್ಬುವುದು
ರವಿಕಿರಣ ತಾಗಿ ಹೂ ಹೊನ್ನಂತೆ ಹೊಳೆವಂತೆ;
ಗೆದ್ದೆಲ್ಲ ಹೆಮ್ಮೆ ಇದ್ದಲ್ಲೆ ಪುಡಿ ಪುಡಿ, ಮುಳಿದು
ಹುಬ್ಬುಗಂಟಿಕ್ಕಲದು ಎಲ್ಲ ಕಥೆ ಮುಗಿದಂತೆ.
ದಿಟ್ಟ ಹೋರಾಟಗಳ ಸಾರಿ ಸಾವಿರ ಬಾರಿ
ಗೆದ್ದು ಯಾವಾಗಲೋ ಒಮ್ಮೆ ಬಿದ್ದರೆ ಮಲ್ಲ,
ಗೌರವದ ಶಿಖರದಿಂದುರುಳಿ ಗೋರಿಗೆ ದಾರಿ
ಹೊಳೆಯಲ್ಲಿ ಹುಣಿಸೆ ತೊಳೆದಂತೆ ಹಿಂದಿನದೆಲ್ಲ.
ನಾನೆ ಸುಖಿ ಕೊಟ್ಟು ಪಡೆದಿರುವೆ ಪ್ರೀತಿಯನೆಲ್ಲ,
ತೊರೆಯುವವನಲ್ಲ, ತೊರೆಯುವರೆಂಬ ಭಯವಿಲ್ಲ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 25
Let those who are in favour with their stars

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಂಸ್ತ್ರೀ – ೬
Next post ಬಿಗಿಯಾದ ಬಳೆ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

cheap jordans|wholesale air max|wholesale jordans|wholesale jewelry|wholesale jerseys