ವಿಧಿಯ ದುರ್ಲಕ್ಷ್ಯಕ್ಕೆ ಜನದ ನಿರ್ಲಕ್ಷ್ಯಕ್ಕೆ

ವಿಧಿಯ ದುರ್ಲಕ್ಷ್ಯಕ್ಕೆ ಜನದ ನಿರ್ಲಕ್ಷ್ಯಕ್ಕೆ
ತುತ್ತಾಗಿ ಕುಳಿತು ನಾನೊಬ್ಬನೇ ದುಃಖಿಸುವೆ
ನನ್ನೀ ಅನಾಥತೆಗೆ. ಕಿವಿಸತ್ತ ಸ್ವರ್ಗಕ್ಕೆ
ಮೊರೆಯಿಡುವೆ ಒಂದೆ ಸಮ. ಬರಿವ್ಯರ್ಥ ಚೀರಿಡುವೆ
ನನ್ನ ಬಾಳನು ನಾನೆ ಶಪಿಸಿ, ಭರವಸೆ ಸುರಿವ
ಯಾರ ಬಾಳನೊ ಬಯಸಿ. ಅವನ ಮೋಹಕ ಮಾಟ,
ಆತ್ಮೀಯರೊಡನಾಟ, ಇವನ ಕಲೆ, ಅವಗಿರುವ
ಅವಕಾಶಗಳ ನೆನೆದು ಇರುವ ಸುಖವೂ ಕಾಟ.
ಆತ್ಮಧಿಕ್ಕಾರಕ್ಕೆ ಸಿಕ್ಕ ಈ ಹೊತ್ತಲ್ಲಿ
ನಿನ್ನ ನೆನಪಾಯಿತೋ, ಅಹ ! ಪ್ರಭಾತದಲ್ಲಿ
ಬುವಿ ಜಿಗಿದು ಮುಗಿಲೇರಿ ದಿವದ ಬಾಗಿಲಿನಲ್ಲಿ
ಹಾಡಿ ಬಾನಾಡಿ ನಲಿಯುವುದು ಮನ ಖುಷಿಯಲ್ಲಿ.
ನಿನ್ನ ಪ್ರೇಮದ ಮಧುರ ಸ್ಮೃತಿಗರಳಿ ಭಾಗ್ಯಗಳು
ಅವರೆದುರು ಚಕ್ರವರ್ತಿಯ ಬಾಳು ಬರಿಧೂಳು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 29
When, in disgrace with fortune and men’s eyes

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಂಸ್ತ್ರೀ – ೮
Next post ಒಡೆದ ಕನಸು

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys