ವಿಧಿಯ ದುರ್ಲಕ್ಷ್ಯಕ್ಕೆ ಜನದ ನಿರ್ಲಕ್ಷ್ಯಕ್ಕೆ
ತುತ್ತಾಗಿ ಕುಳಿತು ನಾನೊಬ್ಬನೇ ದುಃಖಿಸುವೆ
ನನ್ನೀ ಅನಾಥತೆಗೆ. ಕಿವಿಸತ್ತ ಸ್ವರ್ಗಕ್ಕೆ
ಮೊರೆಯಿಡುವೆ ಒಂದೆ ಸಮ. ಬರಿವ್ಯರ್ಥ ಚೀರಿಡುವೆ
ನನ್ನ ಬಾಳನು ನಾನೆ ಶಪಿಸಿ, ಭರವಸೆ ಸುರಿವ
ಯಾರ ಬಾಳನೊ ಬಯಸಿ. ಅವನ ಮೋಹಕ ಮಾಟ,
ಆತ್ಮೀಯರೊಡನಾಟ, ಇವನ ಕಲೆ, ಅವಗಿರುವ
ಅವಕಾಶಗಳ ನೆನೆದು ಇರುವ ಸುಖವೂ ಕಾಟ.
ಆತ್ಮಧಿಕ್ಕಾರಕ್ಕೆ ಸಿಕ್ಕ ಈ ಹೊತ್ತಲ್ಲಿ
ನಿನ್ನ ನೆನಪಾಯಿತೋ, ಅಹ ! ಪ್ರಭಾತದಲ್ಲಿ
ಬುವಿ ಜಿಗಿದು ಮುಗಿಲೇರಿ ದಿವದ ಬಾಗಿಲಿನಲ್ಲಿ
ಹಾಡಿ ಬಾನಾಡಿ ನಲಿಯುವುದು ಮನ ಖುಷಿಯಲ್ಲಿ.
ನಿನ್ನ ಪ್ರೇಮದ ಮಧುರ ಸ್ಮೃತಿಗರಳಿ ಭಾಗ್ಯಗಳು
ಅವರೆದುರು ಚಕ್ರವರ್ತಿಯ ಬಾಳು ಬರಿಧೂಳು.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 29
When, in disgrace with fortune and men’s eyes
Related Post
ಸಣ್ಣ ಕತೆ
-
ಕನಸು ದಿಟವಾಯಿತು
ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…