ಮಧುರ ನೀರವ ಚಿಂತನೆಗಳ ಅಧಿವೇಶನಕೆ

ಮಧುರ ನೀರವ ಚಿಂತನೆಗಳ ಅಧಿವೇಶನಕೆ
ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ;
ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ,
ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು.
ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ
ಹುಗಿದ ಪ್ರಿಯಮಿತ್ರರಿಗೆ ಮರಮರಳಿ ಬೇಯುವೆನು.
ಹಿಂದೆಂದೊ ತೊರೆದ ಪ್ರೀತಿಯ ನೋವಿಗಳುವೆ, ಅಳಿ-
ದೆಷ್ಟೊ ದೃಶ್ಯಗಳ ಬರಿವೆಚ್ಚಕ್ಕೆ ನೋಯುವೆನು.
ಹಳೆಯ ದುಃಖಕ್ಕೆಲ್ಲ ಹೊಸದಾಗಿ ಕೊರಗುವೆ
ಒಂದೊಂದು ವ್ಯಥೆಯನೂ ತಿರುತಿರುಗಿ ನೆನೆಯುತ್ತ,
ಹಿಂದೆ ಅದಕೆಂದೆ ಪಟ್ಟೆಲ್ಲ ದುಃಖದ ಪರಿವೆ
ಇಲ್ಲ ಎಂಬಂತೆ ಹೊಸ ಹೊಸದಾಗಿ ಕುದಿಯುತ್ತ.
ಅದರೀ ನಡುವೆ ಪ್ರಿಯಮಿತ್ರ ನೆನೆದೆನೊ ನಿನ್ನ,
ತುಂಬುವುದು ನಷ್ಟ ಕೊನೆಗೊಳಿಸುವುದು ವ್ಯಥೆಯನ್ನ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 30
When to the sessions of sweet silent thought

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಂಸ್ತ್ರೀ – ೯
Next post ಮಾಮೂಲು

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys