ಮಧುರ ನೀರವ ಚಿಂತನೆಗಳ ಅಧಿವೇಶನಕೆ
ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ;
ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ,
ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು.
ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ
ಹುಗಿದ ಪ್ರಿಯಮಿತ್ರರಿಗೆ ಮರಮರಳಿ ಬೇಯುವೆನು.
ಹಿಂದೆಂದೊ ತೊರೆದ ಪ್ರೀತಿಯ ನೋವಿಗಳುವೆ, ಅಳಿ-
ದೆಷ್ಟೊ ದೃಶ್ಯಗಳ ಬರಿವೆಚ್ಚಕ್ಕೆ ನೋಯುವೆನು.
ಹಳೆಯ ದುಃಖಕ್ಕೆಲ್ಲ ಹೊಸದಾಗಿ ಕೊರಗುವೆ
ಒಂದೊಂದು ವ್ಯಥೆಯನೂ ತಿರುತಿರುಗಿ ನೆನೆಯುತ್ತ,
ಹಿಂದೆ ಅದಕೆಂದೆ ಪಟ್ಟೆಲ್ಲ ದುಃಖದ ಪರಿವೆ
ಇಲ್ಲ ಎಂಬಂತೆ ಹೊಸ ಹೊಸದಾಗಿ ಕುದಿಯುತ್ತ.
ಅದರೀ ನಡುವೆ ಪ್ರಿಯಮಿತ್ರ ನೆನೆದೆನೊ ನಿನ್ನ,
ತುಂಬುವುದು ನಷ್ಟ ಕೊನೆಗೊಳಿಸುವುದು ವ್ಯಥೆಯನ್ನ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 30
When to the sessions of sweet silent thought
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…