ಮಧುರ ನೀರವ ಚಿಂತನೆಗಳ ಅಧಿವೇಶನಕೆ

ಮಧುರ ನೀರವ ಚಿಂತನೆಗಳ ಅಧಿವೇಶನಕೆ
ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ;
ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ,
ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು.
ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ
ಹುಗಿದ ಪ್ರಿಯಮಿತ್ರರಿಗೆ ಮರಮರಳಿ ಬೇಯುವೆನು.
ಹಿಂದೆಂದೊ ತೊರೆದ ಪ್ರೀತಿಯ ನೋವಿಗಳುವೆ, ಅಳಿ-
ದೆಷ್ಟೊ ದೃಶ್ಯಗಳ ಬರಿವೆಚ್ಚಕ್ಕೆ ನೋಯುವೆನು.
ಹಳೆಯ ದುಃಖಕ್ಕೆಲ್ಲ ಹೊಸದಾಗಿ ಕೊರಗುವೆ
ಒಂದೊಂದು ವ್ಯಥೆಯನೂ ತಿರುತಿರುಗಿ ನೆನೆಯುತ್ತ,
ಹಿಂದೆ ಅದಕೆಂದೆ ಪಟ್ಟೆಲ್ಲ ದುಃಖದ ಪರಿವೆ
ಇಲ್ಲ ಎಂಬಂತೆ ಹೊಸ ಹೊಸದಾಗಿ ಕುದಿಯುತ್ತ.
ಅದರೀ ನಡುವೆ ಪ್ರಿಯಮಿತ್ರ ನೆನೆದೆನೊ ನಿನ್ನ,
ತುಂಬುವುದು ನಷ್ಟ ಕೊನೆಗೊಳಿಸುವುದು ವ್ಯಥೆಯನ್ನ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 30
When to the sessions of sweet silent thought

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಂಸ್ತ್ರೀ – ೯
Next post ಮಾಮೂಲು

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…