ಮಧುರ ನೀರವ ಚಿಂತನೆಗಳ ಅಧಿವೇಶನಕೆ

ಮಧುರ ನೀರವ ಚಿಂತನೆಗಳ ಅಧಿವೇಶನಕೆ
ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ;
ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ,
ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು.
ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ
ಹುಗಿದ ಪ್ರಿಯಮಿತ್ರರಿಗೆ ಮರಮರಳಿ ಬೇಯುವೆನು.
ಹಿಂದೆಂದೊ ತೊರೆದ ಪ್ರೀತಿಯ ನೋವಿಗಳುವೆ, ಅಳಿ-
ದೆಷ್ಟೊ ದೃಶ್ಯಗಳ ಬರಿವೆಚ್ಚಕ್ಕೆ ನೋಯುವೆನು.
ಹಳೆಯ ದುಃಖಕ್ಕೆಲ್ಲ ಹೊಸದಾಗಿ ಕೊರಗುವೆ
ಒಂದೊಂದು ವ್ಯಥೆಯನೂ ತಿರುತಿರುಗಿ ನೆನೆಯುತ್ತ,
ಹಿಂದೆ ಅದಕೆಂದೆ ಪಟ್ಟೆಲ್ಲ ದುಃಖದ ಪರಿವೆ
ಇಲ್ಲ ಎಂಬಂತೆ ಹೊಸ ಹೊಸದಾಗಿ ಕುದಿಯುತ್ತ.
ಅದರೀ ನಡುವೆ ಪ್ರಿಯಮಿತ್ರ ನೆನೆದೆನೊ ನಿನ್ನ,
ತುಂಬುವುದು ನಷ್ಟ ಕೊನೆಗೊಳಿಸುವುದು ವ್ಯಥೆಯನ್ನ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 30
When to the sessions of sweet silent thought

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಂಸ್ತ್ರೀ – ೯
Next post ಮಾಮೂಲು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…