ಪ್ರಭುದೃಷ್ಟಿ ಹರಿದು ಗಿರಿತುದಿಗೆ ಹೆಮ್ಮೆಯನೆರೆದು,
ಹೊನ್ನ ತುಟಿಯೊತ್ತಿ ಹಸಿರೆದೆಗೆ ಮುತ್ತನು ಸುರಿದು,
ಮಂಕುತೊರೆಮೈಗೆ ಬಂಗಾರ ರಸವನು ಬಳಿದು,
ಹೊಳೆವ ಬೆಳಗಿನ ಚೆಲುವ ನೋಡಿರುವೆ ಮೈಮರೆದು.
ಥಟ್ಟನೇಳುವುವು ಕೆಳಗಲೆವ ಕಾರ್ಮೋಡಗಳು
ದಿವ್ಯಮುಖ ಮರೆಸಿ ಕರಿತೆರೆಯಾಗಿ ತೇಲುವುವು,
ಪಶ್ಚಿಮಕೆ ಸರಿಯುವುದು ನೊಂದು ಅವಮಾನದೊಳು
ಸದ್ದಿರದೆ ರವಿಬಿಂಬ ಒಂಟಿ ಇಳೆಯನ್ನುಳಿದು.
ನನ್ನ ಬಾಳಿನಲು ಹಿಂದೊಮ್ಮೆ ಭಾಸ್ಕರನುದಿಸಿ
ಜ್ವಲಿಸಿ ಬೆಳಗಿದ ನನ್ನ ಮುಖಕೆ ಕಾಂತಿಯನೆರೆದು;
ಅದರೊಂದೇ ಗಳಿಗೆ ಮಾತ್ರ, ಮತ್ತೆಲ್ಲಿ ? ಮಸಿ
ಮುಗಿಲು ನಿಂತಿದೆ ನಡುವೆ ಸಂಬಂಧವನೆ ಹರಿದು.
ನನ್ನೊಲುಮೆ ಇದರಿಂದ ಕಣದಷ್ಟೂ ಅಲುಗಿಲ್ಲ ;
ದಿವದ ರವಿಗೇ ಗ್ರಹಣ, ಇಳೆಯ ರವಿಗೇಕಿಲ್ಲ ?
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 33
Full many a glorious morning have I seen
Related Post
ಸಣ್ಣ ಕತೆ
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…