ಎಷ್ಟಾದರೂ ನಾನು ನಿನ್ನ ಗುಲಾಮ ತಾನೆ ?
ಕಾಯುವೆನು ನಿನ್ನ ಬಿಡುವಿಗೆ, ನಿನ್ನ ಇಚ್ಛೆಗೆ;
ನನ್ನ ಕಾಲ ಅಮೂಲ್ಯವೇನಲ್ಲ ಪ್ರಭು, ನೀನೆ
ಕಾರ್ಯವೊಂದನು ನನಗೆ ಆದೇಶಿಸುವವರೆಗೆ.
ನಿನಗಾಗಿ ಕಾಯುತ್ತೆ ಗಡಿಯಾರ ನೋಡುತ್ತ
ಕೊನೆಯಿರದ – ಗಂಟೆ – ಲೋಕವನು ಹಳಿಯಲಿ ಹೇಗೆ ?
ನೀನು ಪ್ರಭು, ನನ್ನ ನೀನಾಗಿ ಬೀಳ್ಕೊಟ್ಟಿರುತ
ವಿರಹ ಕಹಿಯೆಂದು ನಾ ದೊರಬಹುದೇ ಹೇಗೆ ?
ಅಥವಾ ಅಸೂಯೆಯುಕ್ಕಿ ಎಲ್ಲಿರುವೆ, ಯಾರಲ್ಲಿ
ಏನ ನಡೆಸಿರುವೆ ಎಂದು ಪ್ರಶ್ನಿಸಬಹುದೆ ?
ಯಾರೊಡನೆಯೋ ಇರಲಿ, ಅವರ ಸುಖವಾಗಿಡಲಿ
ಎಂದು ದುಃಖಿ ಗುಲಾಮನಂತೆ ಕಾಯುವೆ ನಿನಗೆ.
ಪ್ರೇಮ ಅದೆಷ್ಟು ಶುದ್ದ ಪೆದ್ದು ಎಂದರೆ, ನೀನು
ಬಯಸಿ ಏನೇ ಮಾಡು ತಪ್ಪು ತಿಳಿಯೆನು ನಾನು.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 57
Being your slave what should i do but tend
Related Post
ಸಣ್ಣ ಕತೆ
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…
-
ಮೇಷ್ಟ್ರು ರಂಗಪ್ಪ
ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…