ಅಲೆ ಉರುಳಿ ಸರಿದಂತೆ ಹರಳು ಚೆಲ್ಲಿದ ದಡಕೆ

ಅಲೆ ಉರುಳಿ ಸರಿದಂತೆ ಹರಳು ಚೆಲ್ಲಿದ ದಡಕೆ
ಧಾವಿಸುತ್ತಿವೆ ನಮ್ಮ ಗಳಿಗೆಗಳು ಗುರಿ ಕಡೆಗೆ ;
ಮುಂಚೆ ಸರಿದುದರ ಎಡೆದೊರೆತು ಹಿಂದಿನ ಕ್ಷಣಕೆ
ಒಂದೆ ಸಮ ಸ್ಪರ್ಧೆಯಲಿ ಮುಂದೊಡುತಿವೆ ಜೊತೆಗೆ.
ಕಣ್ತೆರೆದ ಬದುಕು ಬೆಳಕಿನ ಪಾತ್ರದಲಿ ಚಲಿಸಿ,
ತೆವಳುತ್ತ ಬಲಿಯುತ್ತ ಏರುವುದು ಶಿಖರವನು ;
ಕಾಡುವುವು ಗ್ರಹಣ ಆ ತೇಜದೇಳ್ಗೆಯ ಸೆಣಸಿ,
ಕೆಡಿಸುವನು ಕಾಲ ತಾನೇ ಒಮ್ಮೆ ಕೊಟ್ಟುದನು.
ಯೌವನದ ಏಳಿಗೆಯ ತಲೆಗೆ ತಡೆಮೊಳೆ ಹೊಡೆದು
ಚೆಲುವಿನಾ ಹಣೆಯಲ್ಲಿ ಗೆರೆಗಳನು ಕೊರೆಯುವನು,
ಬಾಳು ನೀಡಿದಪೂರ್ವ ವಸ್ತುಗಳ ನುಂಗುವನು,
ಬಿಡದೆ ಕುಡುಗೋಲಿಂದ ಎಲ್ಲವನು ಸವರುವನು.
ಆದರೇನಂತೆ ನಿನ್ನನು ಹೊಗಳುವೀ ಕವಿತೆ
ಉಳಿವುದೆಂದೊ ಕ್ರೂರಿ ಕಾಲನಿಗೂ ಸಿಗದಂತೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 60
Like as the waves make towards the pebbled shore

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉತ್ತರಣ – ೮
Next post ದೇವಕಿ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…