ಅಲೆ ಉರುಳಿ ಸರಿದಂತೆ ಹರಳು ಚೆಲ್ಲಿದ ದಡಕೆ
ಧಾವಿಸುತ್ತಿವೆ ನಮ್ಮ ಗಳಿಗೆಗಳು ಗುರಿ ಕಡೆಗೆ ;
ಮುಂಚೆ ಸರಿದುದರ ಎಡೆದೊರೆತು ಹಿಂದಿನ ಕ್ಷಣಕೆ
ಒಂದೆ ಸಮ ಸ್ಪರ್ಧೆಯಲಿ ಮುಂದೊಡುತಿವೆ ಜೊತೆಗೆ.
ಕಣ್ತೆರೆದ ಬದುಕು ಬೆಳಕಿನ ಪಾತ್ರದಲಿ ಚಲಿಸಿ,
ತೆವಳುತ್ತ ಬಲಿಯುತ್ತ ಏರುವುದು ಶಿಖರವನು ;
ಕಾಡುವುವು ಗ್ರಹಣ ಆ ತೇಜದೇಳ್ಗೆಯ ಸೆಣಸಿ,
ಕೆಡಿಸುವನು ಕಾಲ ತಾನೇ ಒಮ್ಮೆ ಕೊಟ್ಟುದನು.
ಯೌವನದ ಏಳಿಗೆಯ ತಲೆಗೆ ತಡೆಮೊಳೆ ಹೊಡೆದು
ಚೆಲುವಿನಾ ಹಣೆಯಲ್ಲಿ ಗೆರೆಗಳನು ಕೊರೆಯುವನು,
ಬಾಳು ನೀಡಿದಪೂರ್ವ ವಸ್ತುಗಳ ನುಂಗುವನು,
ಬಿಡದೆ ಕುಡುಗೋಲಿಂದ ಎಲ್ಲವನು ಸವರುವನು.
ಆದರೇನಂತೆ ನಿನ್ನನು ಹೊಗಳುವೀ ಕವಿತೆ
ಉಳಿವುದೆಂದೊ ಕ್ರೂರಿ ಕಾಲನಿಗೂ ಸಿಗದಂತೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 60
Like as the waves make towards the pebbled shore
Related Post
ಸಣ್ಣ ಕತೆ
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…