ಕಾಲಪುರುಷನ ಕ್ರೂರಹಸ್ತ ಹಳೆವೈಭವದ
ಭವ್ಯ ಸ್ಮೃತಿಗಳ ಗರ್ವಭಂಗ ಮಾಡಿದ್ದನ್ನು;
ಎತ್ತರದ ಸೌಧಗಳೆ ತತ್ತರಿಸಿ ನೆಲಕುರುಳಿ
ಮರ್ತ್ಯರೋಷಕ್ಕೆ ವಿಗ್ರಹಗಳಳಿದ್ದನ್ನು ;
ದಡದ ಮಡಿಲಿಗೆ ಬೆಳೆದ ಭಾರಿ ರಾಜ್ಯಗಳನ್ನೆ
ಹಸಿದ ಸಾಗರ ಉಕ್ಕಿ ನೆಕ್ಕಿ ತೇಗಿದ್ದನ್ನು;
ಗಟ್ಟಿ ಮಣ್ಣನು ಗೆದ್ದು ತಂದು ನೆರೆ ತನ್ನೊಡನೆ
ಕೊರತೆ ಸಮೃದ್ಧಿಗಳ ನೆಲೆ ಬದಲಿಸಿದ್ದನ್ನು-
ಎಲ್ಲವನು ಬಲ್ಲೆ. ಈ ಏರುಪೇರನ್ನು, ಘನ
ರಾಜ್ಯಗಳೆ ಮಣ್ಣಾದುದನ್ನು ನೋಡುತ ಹಾಗೇ
ನುಸುಳುವುದು ಏನೊ ಯೋಚನೆ ಮನಕೆ : ಒಂದುದಿನ
ಬಂದೊಯ್ಯುವನು ಕಾಲ ನನ್ನೊಲವನೂ ಹೀಗೆ !
ಈ ಚಿಂತೆಯೋ ಸಾವಿನಂತೆ. ಎಲ್ಲಿದೆ ಆಯ್ಕೆ
ಅಳುವುದಲ್ಲದೆ ಕಳೆಯಲೊಪ್ಪದುದ ಪಡೆದುದಕೆ ?
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 64
When I have seen by Time’s fell hand defaced
Related Post
ಸಣ್ಣ ಕತೆ
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ಪ್ರಥಮ ದರ್ಶನದ ಪ್ರೇಮ
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…