ಕಲ್ಲು ಹಿತ್ತಾಳೆ ನೆಲ ಕೊನೆಯಿರದ ಕಡಲ ಜಲ
ಎಲ್ಲದರ ಬಲ ಮೀರಿ ಆಳುತ್ತಿರಲು ಸಾವು
ಹೂವಿಗೂ ಹೆಚ್ಚು ಕೋಮಲವೆನ್ನಿಸುವ ವಿರಳ
ಚೆಲುವು ತಡೆದೀತೇನು ಅದರ ಆಕ್ರೋಶವನು ?
ದುರ್ಭೇದ್ಯ ಶಿಲೆಗೆ, ಉಕ್ಕಿನ ದ್ವಾರಗಳ ಧೃತಿಗೆ
ಕಾಲ ಮಣಿಯುವ ಬದಲು ಅವುಗಳೇ ಸಮೆದಿರಲು,
ಅವಶೇಷಭರಿತ ಕಾಲದ ಬಡಿಗೆಯೇಟಿಗೆ
ಬೇಸಿಗೆ ವಸಂತಸಿರಿ ಹೇಗೆ ಎದೆಯೊಡ್ಡುವುದು ?
ಎಂಥ ಭೀಕರ ಚಿಂತೆ, ಅಯ್ಯೋ ಬಟ್ಚಿಡಲೆಲ್ಲಿ
ಕಾಲ ಸಂಪುಟದಿಂದ ಮಣಿ ರತ್ನ ಪದಕವನು ?
ಅವನ ಮಿಂಚಿನ ಹೆಜ್ಜೆ ಹಿಂದೆಳೆವ ಕೈಯೆಲ್ಲಿ ?
ಚೆಲುವಿನೀ ಸುಲಿಗೆ ತಡೆಯುವ ಧೀರ ಯಾರವನು ?
ಇಲ್ಲ ಯಾರೂ ಇದು ಪವಾಡವೊಂದಕೆ ಸಾಧ್ಯ,
ಕಪ್ಪು ಮಸಿಯೊಳು ಜ್ವಲಿಸಬಹುದು ಒಲವಿದು ನಿತ್ಯ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 65
Since brass nor stone, nor earth, nor boundless sea
Related Post
ಸಣ್ಣ ಕತೆ
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಒಲವೆ ನಮ್ಮ ಬದುಕು
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…