ಇದನ್ನೆಲ್ಲ ಕಂಡು ಸಾಯುವುದೆ ಮೇಲೆನಿಸುವುದು !

ಇದನ್ನೆಲ್ಲ ಕಂಡು ಸಾಯುವುದೆ ಮೇಲೆನಿಸುವುದು !
ದಟ್ಟ ದಾರಿದ್ರ್ಯದಲಿ ಪ್ರತಿಭೆ ಕಣ್ತೆರೆಯುವುದು,
ಹುಟ್ಬುಮುಟ್ಠಾಳ ಏಳಿಗೆ ಪಡೆದು ಮೆರೆಯುವುದು,
ಪರಿಶುದ್ಧ ನಿಷ್ಠೆ ವಂಚನೆಗೆ ಬಲಿಹೋಗುವುದು,
ಮಾನಕ್ಕೆ ಮರ್‍ಯಾದೆ ಕೊಡದ ನಿರ್ಲಜ್ಜನಡೆ,
ಮುಗ್ಧ ಶೀಲಕ್ಕೆ ವಸ್ತ್ರಾಪಹರಣದ ಬೆಲೆ,
ಮುಗ್ಗರಿಸುವಂತೆ ಪರಿಪೂರ್ಣತೆಗೆ ತೊಡಕು ತಡೆ,
ಸಿಂಹಸಾಹಸವ ಕುಂಟಾಗಿಸುವ ನರಿಯ ಕಲೆ,
ಕಲೆಯ ನಾಲಿಗೆಯನ್ನೆ ಕಟ್ಟಿರುವ ಅಧಿಕಾರ,
ಬುದ್ಧಿ ಕೌಶಲ್ಯಕ್ಕೆ ಪೆದ್ದರ ನಿಯಂತ್ರಣ,
ಸರಳ ಸತ್ಯಕ್ಕೆ ಸಾಮಾನ್ಯತೆಯ ಸತ್ಕಾರ,
ಶ್ರೇಷ್ಠೆತೆಗೆ ಕೀಳು ನೀಚರ ಸೇವೆ ಬಹುಮಾನ :
ಸಾಗುವುದೆ ಲೇಸೆನಿಸುವುದು ನೋಡಿ ಇದನೆಲ್ಲ
ಅದರೆನ್ನೊಲವ ಏಕಾಕಿ ಬಿಡಬೇಕಲ್ಲ !
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 66
Tired with all these, for restful death I cry

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉತ್ತರಣ – ೧೨
Next post ಅಚ್ಚರಿ

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…