ಈ ಗತಿಶೀಲ ಜಗದಲ್ಲಿ

ಈ ಗತಿಶೀಲ ಜಗದಲ್ಲಿ
ಅತಿಯಾಗದೆ ಇರು ಇತಿಯಾಗದೆ ಇರು
ಶ್ರುತಿ ಮಾಡಿದ ವೀಣೆಯ ಹಾಗಿರು

ನುಡಿಸುವ ಗಾಯಕ ನುಡಿಸುವ ವೇಳೆಗೆ
ನಡೆಸುವ ಗುರು ನಡೆಸುವ ವೇಳೆಗೆ
ತಡವರಿಸುವ ಭಯ ಯಾತಕೆ ಹೇಳು

ಮಗುವಿನ ಸೋಜಿಗ ಅಂತೆಯೆ ಇರಲಿ
ನಗುವಿನ ಚೆಲುವು ಮಾಯದೆ ಇರಲಿ
ಮುಗಿಲ ರೂಪಗಳು ಬದಲಾಗುತ ಇರಲಿ
ಹಗಲಿರುಳುಗಳು ಮುಗಿಯದೆ ಇರಲಿ

ಮಿಡಿಯಲಿ ಮನ ಮೋಹನ ಮುರಲಿಗೆ
ತುಡಿಯಲಿ ಎದೆ ಜೀವನ ಪ್ರೀತಿಗೆ
ಒಡಲಾಳದ ನಿಜ ಕ್ಷಣದಿಂದ ಕ್ಷಣಕೆ
ತಡೆಯಾಗಲಿ ಸಂಕಲ್ಪ ಹಿಂಸೆಗೆ

ಇರು ದಾರಿಯ ಬೆಳಕಿನ ಹಾಗೆ
ಸುರಿ ಅರೆಗಾಲದ ಮಳೆಯ ಹಾಗೆ
ಆರ್ದ್ರವಾಗು ಬುದ್ಧ ಭಗವಾನನ ಕರುಣೆಯ ಹಾಗೆ
ನಿದ್ರಿಸುವುದಾದರೆ ನಿದ್ರಿಸು
ತಾಯ ತೊಡೆಯಲಿ ಹಸುಳೆ ನಿದ್ರಿಸುವಂತೆ
*****

One thought on “0

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೪
Next post ನನ್ನಯ ಪ್ರೀತಿಯನು

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys